ನವದೆಹಲಿ: 12ನೇ ಶತಮಾನದ ಮಹಾನ್ ಸಮಾಜ ಸುಧಾರಕ, ಸಮಾನತೆಯ ಹರಿಕಾರ ಬಸವಣ್ಣನವರ ಜಯಂತಿಯನ್ನು ಇಂದು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಮಹಾಪುರುಷನಿಗೆ ಗೌರವ ನಮನಗಳನ್ನು ಸಲ್ಲಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, ‘ಭಗವಾನ್ ಬಸವೇಶ್ವರರಿಗೆ ಅವರ ಜಯಂತಿಯಂದು ನಾನು ತಲೆ ಬಾಗುತ್ತೇನೆ. ನಮ್ಮ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಅವರು ಕೇಂದ್ರ ಸ್ಥಾನವನ್ನು ಅಲಂಕರಿಸುತ್ತಾರೆ. ಸಾಮಾಜಿಕ ಸೌಹಾರ್ದತೆ, ಸಹೋದರತ್ವ, ಏಕತೆ ಮತ್ತು ಸಹಾನುಭೂತಿಗೆ ಅವರು ನೀಡಿದ ಪ್ರಾಮುಖ್ಯತೆ, ನಮಗೆ ಸದಾ ಪ್ರೇರಣೆ’ ಎಂದಿದ್ದಾರೆ.
‘ಜಗದ್ಗುರು ಬಸವೇಶ್ವರರು ನಮ್ಮ ಸಮಾಜವನ್ನು ಒಂದುಗೂಡಿಸಿದರು ಮತ್ತು ಜ್ಞಾನದ ಪ್ರಾಮುಖ್ಯತೆಗೆ ಮಹತ್ವ ನೀಡಿದರು’ ಎಂದಿದ್ದಾರೆ.
ಭಗವಾನ್ ಬಸವೇಶ್ವರರು 12ನೇ ಶತಮಾನದಲ್ಲಿ ನಿರಾಕರ ಶಿವ ಆರಾಧನೆಯ ಭಕ್ತಿ ಚಳುವಳಿಯನ್ನು ಆರಂಭಿಸಿದರು. ಅನುಭವ ಮಂಟಪ ರಚಿಸಿದರು. ಪುರುಷ, ಮಹಿಳೆಯರು ಸಮಾನರು ಎಂದು ಪ್ರತಿಪಾದಿಸಿದರು ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು.
ಜಗದ್ಗುರು ಬಸವೇಶ್ವರರು ನಮ್ಮ ಸಮಾಜವನ್ನು ಒಂದುಗೂಡಿಸಿದರು ಮತ್ತು ಜ್ಞಾನದ ಪ್ರಾಮುಖ್ಯತೆಗೆ ಮಹತ್ವ ನೀಡಿದರು.
— Narendra Modi (@narendramodi) April 18, 2018
ಭಗವಾನ್ ಬಸವೇಶ್ವರರಿಗೆ ಅವರ ಜಯಂತಿಯಂದು ನಾನು ತಲೆ ಬಾಗುತ್ತೇನೆ. ನಮ್ಮ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಅವರು ಕೇಂದ್ರಸ್ಥಾನ ಅಲಂಕರಿಸುತ್ತಾರೆ. ಸಾಮಾಜಿಕ ಸೌಹಾರ್ದತೆ, ಸಹೋದರತ್ವ, ಏಕತೆ ಮತ್ತು ಸಹಾನುಭೂತಿಗೆ ಅವರು ನೀಡಿದ ಪ್ರಾಮುಖ್ಯತೆ, ನಮಗೆ ಸದಾ ಪ್ರೇರಣೆ.
— Narendra Modi (@narendramodi) April 18, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.