ದಂತೇವಾಡ: ಛತ್ತೀಸ್ಗಢದ ನಕ್ಸಲ್ ಪೀಡಿತ ದಂತೇವಾಡ ಜಿಲ್ಲೆಯ 18 ವಿದ್ಯಾರ್ಥಿಗಳು Joint Entrance Examination (JEE) Main 2018 ಎಕ್ಸಾಂ ಪಾಸ್ಸಾಗಿದ್ದಾರೆ. ಇದು ಈ ಭಾಗ ನಿಧಾನಕ್ಕೆ ನಕ್ಸಲರ ಕಪಿಮುಷ್ಟಿಯಿಂದ ಹೊರಬಂದು ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿದೆ ಎಂಬುದಕ್ಕೆ ಉದಾಹರಣೆಯಾಗಿದೆ.
‘ಐಐಟಿ ಅಥವಾ ಎನ್ಐಟಿಗಳನ್ನು ಸೇರುವುದು ನಮ್ಮ ಕನಸಾಗಿತ್ತು. ಈಗ ನಮಗೆ ಸಂತೋಷವಾಗುತ್ತಿದೆ. ಜೆಇಇ-ಅಡ್ವಾನ್ಸ್ಡ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೇವೆ, ಅತ್ಯುತ್ತಮ ರೀತಿಯಲ್ಲಿ ಪರೀಕ್ಷೆ ಬರೆಯಲು ಸನ್ನದ್ಧರಾಗಿದ್ದೇವೆ’ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ಒಂದು ಕಾಲದಲ್ಲಿ ನಕ್ಸಲರ ಕಪಿಮುಷ್ಟಿಗೆ ಸಿಕ್ಕು ಈ ಜಿಲ್ಲೆ ಶಿಕ್ಷಣದಲ್ಲಿ ಅತೀವ ಹಿಂದುಳಿದಿತ್ತು, ಆದರೀಗ ಅಲ್ಲಿನ ಯುವ ಜನತೆ ವಿದ್ಯೆಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಧನಾತ್ಮಕ ಬೆಳವಣಿಗೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.