ನವದೆಹಲಿ: ತಮಿಳುನಾಡಿನಲ್ಲಿ ನಡೆಯುತ್ತಿರುವ ಸ್ಟೆರ್ಲೈಟ್ ಪ್ಲಾಂಟ್ ವಿರುದ್ಧದ ಪ್ರತಿಭಟನೆಯ ಬಗ್ಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಆರ್ಎಸ್ಎಸ್ ಸಿದ್ಧಾಂತವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರನ್ನು ಕೊಲ್ಲಲಾಗುತ್ತಿದೆ ಎಂದಿದ್ದಾರೆ. ಈ ಮೂಲಕ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
‘ಆರ್ಎಸ್ಎಸ್ ಸಿದ್ಧಾಂತವನ್ನು ವಿರೋಧಿಸುತ್ತಿರುವುದಕ್ಕಾಗಿ ತಮಿಳಿಗರ ಹತ್ಯೆಯಾಗುತ್ತಿದೆ. ಆರ್ಎಸ್ಎಸ್ ಮತ್ತು ಮೋದಿಯವನ್ನು ತಮಿಳುನಾಡು ತಿರಸ್ಕರಿಸಿದೆ. ತಮಿಳು ಜನರನ್ನು ಹತ್ತಿಕ್ಕಲು ಸಾಧ್ಯವಿಲ್ಲ’ ಎಂದು ರಾಹುಲ್ ತಮಿಳಿನಲ್ಲಿ ಟ್ವಿಟ್ ಮಾಡಿದ್ದಾರೆ.
ಇದಕ್ಕೆ ಪತ್ರಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ’11 ಮಂದಿ ಮೃತರಾದ ದುಃಖ ಪರಿಸ್ಥಿತಿಯ ಲಾಭ ಪಡೆಯಲು ರಾಹುಲ್ ಗಾಂಧಿ ಬಯಸುತ್ತಿದ್ದಾರೆ. ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಗಳ ಕರ್ತವ್ಯ’ ಎಂದಿದ್ದಾರೆ.
ರಾಹುಲ್ ಗಾಂಧೀ ಅವರಿಗೆ ನಾವು 6ನೇ ತರಗತಿಯ ಪಠ್ಯ ಪುಸ್ತಕವನ್ನು ಉಡುಗೊರೆಯಾಗಿ ನೀಡುತ್ತೇವೆ, ಕಾಂಗ್ರೆಸ್ನ ಸೋಲಿಗೆ ರಾಹುಲ್ ಹೇಗೆ ಕಾರಣರಾಗುತ್ತಿದ್ದಾರೆ ಎಂಬುದನ್ನು ನಾವು ನೋಡುತ್ತಿದ್ದೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.