ಲಕ್ನೋ: ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ರಾಜೇಶ್ ಸಾಹ್ನಿ ಅವರು ಪುತ್ರಿಯ ಸಂಪೂರ್ಣ ಶಿಕ್ಷಣದ ವೆಚ್ಚವನ್ನು ಭರಿಸಲು ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಮುಂದಾಗಿದೆ.
ಮೇ 29ರಂದು ಸಾಹ್ನಿ ಅವರು ತಮ್ಮ ಅಧಿಕೃತ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಮಾಹಿತಿ ಇಲ್ಲ. ಉತ್ತರಪ್ರದೇಶದ ಭಯೋತ್ಪಾದನಾ ವಿರೋಧಿ ದಳದಲ್ಲಿ ಅವರು ಹಿರಿಯ ಅಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು.
ಅವರ ಸಾವಿನ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ ಅವರು ಸಿಬಿಐ ತನಿಖೆಗೂ ಆದೇಶಿಸಿದ್ದಾರೆ. ವೃತ್ತಿಪರ ಕಾರ್ಯ ಅವರ ಸಾವಿಗೆ ಕಾರಣವಿರಬಹುದೇನೋ ಎಂಬ ಸಂಶಯವಿದೆ. ಇವರು 1992ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು.
ಅವರ ಪುತ್ರಿಯ ಶಿಕ್ಷಣದ ವೆಚ್ಚವನ್ನು ಮಾನವೀಯ ನೆಲೆಯಲ್ಲಿ ಭರಿಸಲು ಯುಪಿ ಸರ್ಕಾರ ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.