ಚಂಡೀಗಢ: ವಸತಿ ರಹಿತ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಅವರ ಕುಟುಂಬಿಕರಿಗೆ ವಸತಿಯನ್ನು ಒದಗಿಸುವ ಮಹತ್ವದ ಯೋಜನೆಯನ್ನು ಆರಂಭಿಸಲು ಪಂಜಾಬ್ ಸರ್ಕಾರ ನಿರ್ಧರಿಸಿದೆ.
ಪಂಜಾಬ್ ಪೆಂಡು ಆವಾಝ್ ಯೋಜನೆಯನ್ನು ಜಾರಿಗೆ ತಂದು, ಇದರ ಮುಖೇನ ಮೊದಲ ಹಂತದಲ್ಲಿ ವಸತಿ ಹೀನ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಅವರ ಕುಟುಂಬದವರಿಗೆ ವಸತಿಯನ್ನು ನಿರ್ಮಿಸಿಕೊಡಲು ನಿರ್ಧರಿಸಲಾಗಿದೆ. ವಾರ್ಷಿಕ ಆದಾಯ ರೂ.3ಲಕ್ಷಕ್ಕಿಂತ ಕಡಿಮೆ ಇದ್ದವರಿಗೆ ಈ ಸೌಲಭ್ಯ ಸಿಗಲಿದೆ.
ಅವರು ಬಯಸಿದ ಅಥವಾ ವಾಸವಿರುವ ಊರುಗಳಲ್ಲೇ ಅವರಿಗೆ ವಸತಿಯನ್ನು ಕಟ್ಟಿಕೊಡುವ ನಿರ್ಧಾರ ಮಾಡಲಾಗಿದೆ. ದೇಶಕ್ಕೆ ಕೊಡುಗೆ ನೀಡಿದ ಇವರಿಗೆ ಗೌರವದ ಬದುಕು ಕಟ್ಟಿಕೊಡಬೇಕೆಂಬ ಸದುದ್ದೇಶದೊಂದಿಗೆ ಈ ಯೋಜನೆಗೆ ಅನುಷ್ಠಾನಗೊಳ್ಳುತ್ತಿದೆ.
ಈ ಯೋಜನೆಯ ಇತರ ಹಂತಗಳಲ್ಲಿ ಇತರ ಬಡವರಿಗೆ, ವಸತಿಹೀನರಿಗೆ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.