ನವದೆಹಲಿ: ಪ್ರಾಣಿ ಕಲ್ಯಾಣ ಮಂಡಳಿ (ಎನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ)ದ ಕೆಲವು ಸದಸ್ಯರು ತಮ್ಮ ಸ್ವ ಹಿತಾಸಕ್ತಿಗಾಗಿ ಲೆಟರ್ಹೆಡ್ ಮತ್ತು ವಿಸಿಟಿಂಗ್ ಕಾರ್ಡ್ಗಳಲ್ಲಿ ಭಾರತದ ಲಾಂಛನವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ವಂಚನೆ ಮತ್ತು ಕಾನೂನು ಬಾಹಿರ ಕ್ರಮವಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧೀ ಆರೋಪಿಸಿದ್ದಾರೆ.
ಈ ಬಗ್ಗೆ ಅವರು ಪರಿಸರ ಮತ್ತು ಅರಣ್ಯ ಸಚಿವ ಹರ್ಷವರ್ಧನ್ ಅವರಿಗೆ ಪತ್ರ ಬರೆದು, ಸೂಕ್ತ ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ.
ಎನಿಮಲ್ ವೆಲ್ಫೇರ್ ಬೋರ್ಡ್ನ ಕೆಲವು ಸದಸ್ಯರು ಮತ್ತು ನಾಮನಿರ್ದೇಶನಗೊಂಡಿರದ ಸದಸ್ಯರುಗಳೂ ರಾಜ್ಯ ಸರ್ಕಾರಗಳ ಪ್ರಭಾವ ಬಳಸಿ ವೈಯಕ್ತಿಕ ಲಾಭ ಪಡೆಯಲು ಭಾರತ ಲಾಂಛನವನ್ನು ತಮ್ಮ ಲೆಟರ್ಹೆಡ್, ವಿಸಿಟಿಂಗ್ ಕಾರ್ಡ್ಗಳಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕೆಲವರು, ಪರಿಸರ, ಅರಣ್ಯ ಮತ್ತು ಹವಮಾನ ವೈಪರೀತ್ಯ ಸಚಿವಾಲಯಗಳ ಲೋಗೋವನ್ನು ಬಳಸುತ್ತಿದ್ದಾರೆ. ಇದು ಕಾನೂನಿನ ದುರ್ಬಳಕೆ, ವಂಚನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.