ಹೈದರಾಬಾದ್: ಬಾಹುಬಲಿಯಂತಹ ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ನಿರ್ದೇಶಕ ಎಸ್ಎಸ್ ರಾಜಮೌಳಿಯವರು ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಸಲುವಾಗಿ ಅಕ್ಷಯ ಪಾತ್ರದೊಂದಿಗೆ ಕೈಜೋಡಿಸಿದ್ದಾರೆ.
ಅಕ್ಷಯ ಪಾತ್ರದ ‘#ಐ ಶೇರ್ ಮೈ ಲಂಚ್’ ಅಭಿಯಾನದಡಿಯಲ್ಲಿ ಸುಮಾರು 2500 ಶಾಲಾ ಮಕ್ಕಳಿಗೆ ಊಟ ನೀಡಲು ಅವರು ನಿರ್ಧರಿಸಿದ್ದಾರೆ.
ಈ ಟ್ವಿಟ್ ಮಾಡಿರುವ ಅವರು, ‘ಈ ವರ್ಷ ಪೂರ್ತಿ ನಾವು ಅಕ್ಷಯ ಪಾತ್ರ ಫೌಂಡೇಶನ್ ಮೂಲಕ 2500 ಶಾಲಾ ಮಕ್ಕಳೊಂದಿಗೆ ನಮ್ಮ ಊಟವನ್ನು ಹಂಚಿಕೊಳ್ಳುತ್ತಿದ್ದೇವೆ’ ಎಂದಿದ್ದಾರೆ. ಅಲ್ಲದೇ ಅಭಿಮಾನಿಗಳಿಗೂ ಈ ಕಾರ್ಯಕ್ಕೆ ಕೈಜೋಡಿಸುವಂತೆ ಕರೆ ನೀಡಿದ್ದಾರೆ.
ಅಕ್ಷಯ ಪಾತ್ರ ಫೌಂಡೇಶನ್ ಭಾರತದ 12 ರಾಜ್ಯಗಳಲ್ಲಿ 13,839 ಶಾಲೆಯ 1.6ಮಿಲಿಯನ್ ಮಕ್ಕಳಿಗೆ ಬಿಸಿಯೂಟ ಪೂರೈಕೆ ಮಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.