News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂಡಿಯಾ ಗೇಟ್ ಬಳಿ ರಾಷ್ಟ್ರೀಯ ಸೇನಾ ಸ್ಮಾರಕ

Delhi4ನವದೆಹಲಿ: ಇತ್ತೀಚೆಗಷ್ಟೆ ಸಮರ ಸೇನಾನಿಗಳ ದಶಕಗಳ ಬೇಡಿಕೆಯಾಗಿದ್ದ ಏಕಶ್ರೇಣಿ, ಏಕಪಿಂಚಣಿ ಯೋಜನೆಗೆ ಒಪ್ಪಿಗೆ ಸೂಚಿಸಿರುವ ಕೇಂದ್ರ ಸರ್ಕಾರ, ಇದೀಗ ರಾಷ್ಟ್ರೀಯ ಯುದ್ಧ ಸ್ಮಾರಕ ಹಾಗೂ ರಾಷ್ಟ್ರೀಯ ಸಮರ ಮ್ಯೂಸಿಯಂ ಸ್ಥಾಪಿಸುವ ಯೋಜನೆಗೆ ಅನುಮೋದನೆ ನೀಡಿದೆ.

ಸ್ವಾತಂತ್ರ್ಯದ ಬಳಿಕ ದೇಶದ ರಕ್ಷಣೆ, ರಾಷ್ಟ್ರೀಯ ಹಿತಾಸಕ್ತಿ, ದೇಶದ ಸಾರ್ವಭೌಮತೆಗಾಗಿ ಆತ್ಮಸಮರ್ಪಣೆ ಮಾಡಿದ 22,500 ಯೋಧರ ಸ್ಮರಣಾರ್ಥ ದೆಹಲಿಯ ಇಂಡಿಯಾ ಗೇಟ್ ಬಳಿಯ ಪ್ರಿನ್ಸೆಸ್ ಪಾರ್ಕ್‌ನಲ್ಲಿ ಈ ಸ್ಮಾರಕ ಹಾಗೂ ಮ್ಯೂಸಿಯಂ ನಿರ್ಮಿಸುವ ಯೋಜನೆ ಹೊಂದಿದೆ. ಇದು ಸ್ವಾತಂತ್ರ್ಯಾ ನಂತರದ 69 ವರ್ಷಗಳಲ್ಲೇ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ ಮೊದಲ ಸ್ಮಾರಕ, ಮ್ಯೂಸಿಯಂ ಆಗಲಿದೆ. ಅಲ್ಲದೇ ಸ್ವಾತಂತ್ರ್ಯಾ ನಂತರದ ಮೊದಲ ಸರ್ಕಾರಿ ಸ್ಮಾರಕವಾಗಿದೆ. ಸ್ವಾತಂತ್ರ ಪೂರ್ವದಲ್ಲಿ ಇಂಡಿಯಾ ಗೇಟ್, ಅಮರ್ ಜವಾನ್ ಜ್ಯೋತಿ ಸ್ಮಾರಕಗಳು ನಿರ್ಮಾಣಗೊಂಡಿತ್ತು.

ಸರ್ಕಾರ 500 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಆಯೋಜಿಸಿದ್ದು, ಮುಂದಿನ 5 ವರ್ಷಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದರ ಮೇಲ್ವಿಚಾರಣೆಗಾಗಿ ರಕ್ಷಣಾ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು, ನಿರ್ವಹಣಾ ತಂಡ ಸಹಕರಿಸಲಿದೆ. ಈ ಸ್ಮಾರಕವು ಪ್ರವಾಸಿಗರ ಮನಸ್ಸಿನಲ್ಲಿ ದೇಶಭಕ್ತಿ ಮತ್ತು  ಯೋಧರ ಕುರಿತು ಕೃತಜ್ಞತಾ ಭಾವ  ಮೂಡಿಸಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top