News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಯಾರ ರಕ್ಷಣೆಗೂ ನಿಂತಿಲ್ಲ: ಸಿದ್ದರಾಮಯ್ಯ

sidduಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪ್ರಕರಣದಲ್ಲಿ ನಮ್ಮ ಸರ್ಕಾರ ಯಾರ ರಕ್ಷಣೆಗೂ ನಿಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಸರ್ಕಾರ ಏನನ್ನೂ ಮರೆಮಾಚುತ್ತಿಲ್ಲ. ಯಾನ್ನೂ ನಾವು ರಕ್ಷಿಸುತ್ತಿಲ್ಲ. ರವಿ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಅವರ ಪೋಷಕರೊಂದಿಗೆ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಸತ್ಯ ಹೊರಬರಬೇಕು ಎಂದು ನಾವು ಆಶಿಸುತ್ತೇವೆ. ಈ ಬಗ್ಗೆ ರವಿ ಪೋಷಕರಿಗೆ ಭರವಸೆಯನ್ನೂ ನೀಡಿದ್ದೇವೆ’ ಎಂದಿದ್ದಾರೆ.

ಸಿಐಡಿ ಮತ್ತು ಸಿಬಿಐ ಎರಡರ ಮೇಲೆಯೂ ನನಗೆ ನಂಬಿಕೆ ಇದೆ. 35 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ.  ಜನರ ಭಾವನೆಯನ್ನು ನಾನು ಅರ್ಥಮಾಡಿಕೊಳ್ಳುತ್ತೇನೆ ಮತ್ತು ಗೌರವಿಸುತ್ತೇನೆ’ ಎಂದಿದ್ದಾರೆ.

ಸಿಬಿಐ ತನಿಖೆಗೆ ಪ್ರಕರಣವನ್ನು ನೀಡುವಂತೆ ರವಿ ಕುಟುಂವ ವರ್ಗ, ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ರಾಜ್ಯ ಸರ್ಕಾರದ ಮೇಲೆ ಒತ್ತಡವನ್ನು ತೀವ್ರಗೊಳಿಸುತ್ತಿರುವ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ.

Tags: ,

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top