News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಡಿ.ಕೆ.ರವಿ ಅನುಮಾಸ್ಪದ ಸಾವು : ಸಿಬಿಐಗೆ ಪ್ರಕರಣ ಒಪ್ಪಿಸದಿದ್ದಲ್ಲಿ ಕರಾಳ ದಿನ

imagesಪುತ್ತೂರು : ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸದೇ ಇದ್ದಲ್ಲಿ ಮುಖ್ಯಮಂತ್ರಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ದಿನವನ್ನು ಕರಾಳ ದಿನವಾಗಿ ಆಚರಿಸಲಾಗುವುದು ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಚಂದ್ರಶೇಖರ ಎ ಹೇಳಿದ್ದಾರೆ.

ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ದಕ್ಷ ಅಧಿಕಾರಿಯ ಸಾವಿನ ವರದಿ ಬರುವ ಮೊದಲೇ ಆತ್ಮಹತ್ಯೆ ಎಂದು ಬಿಂಬಿಸುವ ರಾಜಕಾರಣಿಗಳು, ಇವರ ಸೇವಕರಂತಿರುವ ಪೊಲೀಸ್ ಅಧಿಕಾರಿಯ ಹೇಳಿಕೆ ಪ್ರಕರಣವನ್ನು ತಿರುಚುವಂತಿದೆ.

ದಕ್ಷ ಅಧಿಕಾರಿಗಳನ್ನು ಹಾಗೂ ಮಾಹಿತಿ ಹಕ್ಕು ಹೋರಾಟಗಾರರನ್ನು ನಿಗೂಢವಾಗಿ ಕಣ್ಮರೆಯಾಗುವಂತೆ ಮಾಡುವ ಪ್ರಕರಣ ನಡೆಯುತ್ತಿದ್ದರೂ, ಸರ್ಕಾರ ಸೂಕ್ತ ಸ್ಪಂದನೆಯೇ ನೀಡುತ್ತಿಲ್ಲ. ಪಿಎಸ್‌ಐ ಮಲ್ಲಿಕಾರ್ಜುನ ಬಂಡೆ ಸಾವಿನ ಪ್ರಕರಣದಲ್ಲಿ ನ್ಯಾಯ ನೀಡದ ಸರ್ಕಾರ, ಇದೀಗ ಡಿ.ಕೆ.ರವಿ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಸಿದ್ಧತೆ ನಡೆಸುತ್ತಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top