ಮಂಗಳೂರು: ತಾಲೂಕಿನ ಪುತ್ತಿಗೆ ಜಿಲ್ಲಾ ಪಂಚಾಯತ್ ಅಭ್ಯರ್ಥಿ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಶ್ರೀ ಸುಚರಿತ ಶೆಟ್ಟಿ ನಾಮಪತ್ರವನ್ನು ಸಲ್ಲಿಸಿದ್ದು ಫೆ. 9ರಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಸಂದರ್ಭ ನೀತಿ ಉಲ್ಲಂಘನೆಯಾಗಿದೆ ಎಂದು ಅವರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಸರಕಾರಕ್ಕೆ ತೆರಿಗೆ ಮತ್ತು ನೀರಿನ ಬಿಲ್ಲು ಪಾವತಿಸಿಲ್ಲ ಎಂದು ಆಕ್ಷೇಪಣೆ ಹಾಕಿ ಅವರ ನಾಮಪತ್ರವನ್ನು ಅಂಗೀಕಾರ ಮಾಡಬಾರದೆಂದು ಚುನಾವಣಾಧಿಕಾರಿಯಲ್ಲಿ ವಿನಂತಿ ಮಾಡಲಾಗಿದ್ದು, ಅದರ ಬಗ್ಗೆ ಕೂಲಂಕುಶ ತನಿಖೆ ನಡೆಸಲು ಬರುವಂತೆ ಚುನಾವಣಾಧಿಕಾರಿ ಸೂಚಿಸಿದ್ದರು. ಚುನಾವಣಾಧಿಕಾರಿಗಳ ಕಛೇರಿಗೆ ಹಾಜರಾಗಿ ಅದಕ್ಕೆ ಪೂರಕವಾಗಿ ದಾಖಲೆಗಳನ್ನು ಸುಚರಿತ ಶೆಟ್ಟಿ ನೀಡಿದ್ದರು.
ಸದ್ರಿ ಸಮಯದಲ್ಲಿ ಸಚಿವರಾದ ಸನ್ಮಾನ್ಯ ಕೆ.ಅಭಯಚಂದ್ರ ಜೈನ್ ರವರು ಏಕಾಏಕಿ ಅವರ ಬೆಂಬಲಿಗರೊಂದಿಗೆ ಚುನಾವಣಾ ಕಚೇರಿಗೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಾಮಪತ್ರವನ್ನು ಅಂಗೀಕರಿಸುವಂತೆ ಒತ್ತಡವನ್ನು ಹೇರಿದ್ದು, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸಂಬಂಧಪಟ್ಟ ದಾಖಲೆಗಳನ್ನು ಹಾಜರುಪಡಿಸಿದಾಗ ಸಚಿವರು ತನಗೆ ಬೆದರಿಕೆ ಹಾಕಿದ್ದು, ಸಚಿವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಈ ವೇಳೆ ವಿನಂತಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.