ನವದೆಹಲಿ: ಜೆಎನ್ಯು ವಿಶ್ವವಿದ್ಯಾಲಯದಲ್ಲಿ ದೇಶದ್ರೋಹದ ಚಟುವಟಿಕೆ ನಡೆಸಿದ ಆರೋಪದ ಮೇರೆಗೆ ಬಂಧಿತನಾಗಿರುವ ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್ನನ್ನು ಬುಧವಾರ ದೆಹಲಿಯ ಪಟಿಯಾಲ ಕೋರ್ಟ್ಗೆ ವಿಚಾರಣೆ ಕರೆತರಲಾಗಿದೆ.
ಕೋರ್ಟ್ ಕನ್ಹಯ್ಯ ಕುಮಾರ್ನ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದ್ದು, ಮಾರ್ಚ್ 2 ರವರೆಗೆ ಬಂಧನದಲ್ಲಿರಲಿದ್ದಾನೆ.
ಈತನನ್ನು ಕೋರ್ಟ್ಗೆ ಕರೆತರುತ್ತಿದ್ದ ವೇಳೆಯೇ ವಕೀಲರ ಎರಡು ಗುಂಪುಗಳ ನಡುವೆ ಉದ್ವಿಗ್ನ ಜಟಾಪಟಿ ನಡೆದಿದೆ. ಈ ಪ್ರಕರಣದ ಬಗ್ಗೆ ಸುಪ್ರೀಂಕೊರ್ಟ್ ದೆಹಲಿ ಪೊಲೀಸರಿಂದ ಸ್ಟೇಟಸ್ ರಿಪೋರ್ಟ್ ಕೇಳಿದೆ.
ಈ ಪ್ರಕರಣದ ಕೂಲಂಕುಷ ತನಿಖೆ ನಡೆಸಿ ವರದಿಯನ್ನು ಗೃಹಸಚಿವಾಲಯಕ್ಕೆ ಕಳುಹಿಸುವುದಾಗಿ ದೆಹಲಿ ಪೊಲೀಸ್ ಕಮಿಷನರ್ ಬಸ್ಸಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.