ನವದೆಹಲಿ: ಬಜೆಟ್ ಅಧಿವೇಶನದ ಹಿನ್ನಲೆಯಲ್ಲಿ ರಾಜ್ಯಸಭಾ ಮುಖ್ಯಸ್ಥ ಹಮೀದ್ ಅನ್ಸಾರಿಯವರು ಶನಿವಾರ ಸರ್ವಪಕ್ಷ ಸಭೆ ಕರೆದಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೂ ತನ್ನ ಪಕ್ಷದ ಪ್ರಮುಖ ಸಭೆಯನ್ನು ಕರೆದಿದ್ದು, ಅಧೀವೇಶನದಲ್ಲಿ ಆಡಳಿತ ಪಕ್ಷವನ್ನು ಸಿಲುಕಿಸುವ ತಂತ್ರದ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಜೆಎನ್ಯು ವಿವಾದ, ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿ ರೋಹಿತ್ ಆತ್ಮಹತ್ಯೆ, ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಮತ್ತು ಹಿಂತೆಗೆತ ಈ ಎಲ್ಲಾ ವಿಷಯಗಳನ್ನು ಹಿಡಿದುಕೊಂಡು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿ ಬೀಳುವ ಸಾಧ್ಯತೆ ಇದೆ.
ಪ್ರತಿಪಕ್ಷಗಳು ಸುಗಮ ಕಲಾಪಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿಕೊಳ್ಳುವ ಸಲುವಾಗಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಸೋಮವಾರ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ.
ಪ್ರತಿಪಕ್ಷಗಳು ಚರ್ಚೆಯಲ್ಲಿ ಭಾಗವಹಿಸಿ ಕಲಾಪವನ್ನು ಯಶಸ್ವಿಗೊಳಿಸಬೇಕು ಎಂದು ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಅವರೂ ಪ್ರತಿಪಕ್ಷಗಳನ್ನು ಕೇಳಿಕೊಂಡಿದ್ದಾರೆ.
ಬಜೆಟ್ ಅಧೀವೇಶನ ಫೆ.29ರಿಂದ ಆರಂಭವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.