ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಗ್ರಾಮೀಣ ಅಭಿವೃದ್ಧಿ ಸಚಿವಾಲಯ 12,230 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಬಿರೆಂದರ್ ಸಿಂಗ್ ಹೇಳಿದ್ದಾರೆ.
ಈ ನಿಧಿಯು ಕಳೆದ 2015-16ನೇ ಹಣಕಾಸು ವರ್ಷದಲ್ಲಿ ಉಳಿದಿರುವ ಬಾಕಿ ವೇತನವನ್ನು ಸರಿದೂಗಿಸುವುದರ ಜೊತೆಗೆ, 2016-17ನೇ ಸಾಲಿನ ಯೋಜನೆಗಳಿಗೂ ಸಹಾಯಕವಾಗಲಿದೆ. ಮನ್ರೇಗಾ ಯೋಜನೆಯ ಉದ್ದೇಶಗಳನ್ನು ಈಡೇರಿಸಲು ಸಾಕಷ್ಟು ಸಂಪನ್ಮೂಲಗಳ ಹರಿವು ಖಾತ್ರಿಗೆ ಸರ್ಕಾರ ಬದ್ಧವಾಗಿದೆ. ಸಚಿವಾಲಯವು ಗ್ರಾಮೀಣ ಪ್ರದೇಶಗಳಲ್ಲಿ 60:40 ವೇತನ-ವಸ್ತು ಅನುಪಾತವನ್ನಿಟ್ಟುಕೊಂಡು ಉತ್ತಮ ಗುಣಮಟ್ಟದ ವಸ್ತುಗಳ ಉತ್ಪಾದನೆಯನ್ನು ಖಚಿತಪಡಿಸಿಕೊಳ್ಳಲಿದೆ ಎಂದು ಬಿರೆಂದರ್ ಸಿಂಗ್ ಹೇಳಿದ್ದಾರೆ.
2015-16ನೇ ಸಾಲಿನ ಒಟ್ಟು ಖರ್ಚು -ವೆಚ್ಚಗಳು 41,371 ಕೋಟಿ ರೂ. ಆಗಿದ್ದು, ಇದರಲ್ಲಿ 30,139 ಕೋಟಿ ರೂ. ವೇತನಕ್ಕೆ ತಗುಲಿದೆ. ಇದು ಈವರೆಗಿನ ಅತ್ಯಧಿಕ ವೆಚ್ಚವಾಗಿದೆ. ಆದರೆ ಯೋಜನೆ ಕಳೆದ 3 ವರ್ಷದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.