News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಮರಾವತಿ ಆಂಧ್ರಪ್ರದೇಶದ ರಾಜಧಾನಿ?

amaravathi1ಹೈದರಾಬಾದ್: ಗುಂಟೂರು ಜಿಲ್ಲೆಯಲ್ಲಿ  ನಿರ್ಮಾಣವಾಗಲಿರುವ ಆಂಧ್ರಪ್ರದೇಶದ ನೂತನ ರಾಜಧಾನಿಗೆ ‘ಅಮರಾವತಿ’ ಎಂದು ಹೆಸರಿಡಲು ಆಂಧ್ರ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ರಾಜಧಾನಿ ನಿರ್ಮಿಸಲು ಆಂಧ್ರಪ್ರದೇಶ ಸರ್ಕಾರ ತುಳ್ಳೂರು ಮತ್ತು ಉಂಡವಳ್ಳಿ ಮಂಡಲದ 29 ಗ್ರಾಮಗಳ 33,೦೦೦ ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲಿದೆ. ಸಿಂಗಪುರ ಸರ್ಕಾರ ನೂತನ ರಾಜಧಾನಿಯ ವಿನ್ಯಾಸ ಒದಗಿಸಲಿದೆ. ಅಂದಾಜು 27,೦೦೦ ಕೋಟಿ ವೆಚ್ಚದಲ್ಲಿ ಜಪಾನ್ ಕಂಪೆನಿಗಳು ಕಟ್ಟಡ ನಿರ್ಮಾಣ ಜವಾಬ್ದಾರಿ ವಹಿಸಿಕೊಳ್ಳಲಿವೆ ಎಂದು ಮೂಲಗಳು ತಿಳಿಸಿವೆ.

ಅಮರಾವತಿ ಪಟ್ಟಣ ಕೃಷ್ಣಾ ನದಿ ದಡದಲ್ಲಿದೆ. ಗುಂಟೂರು ಪಟ್ಟಣದಿಂದ 35 ಕಿಲೋ ಮೀಟರ್ ಮತ್ತು ವಿಜಯವಾಡದಿಂದ 40 ಕಿಲೋ ಮೀಟರ್ ದೂರದಲ್ಲಿರುವ ಈ ಐತಿಹಾಸಿಕ ಪಟ್ಟಣದಲ್ಲಿ ಅಮರೇಶ್ವರ ದೇವಾಲಯವಿದೆ. ಕೃಷ್ಣಾ ನದಿ ದಡದಲ್ಲಿರುವ ಅಮರಾವತಿ ಸಣ್ಣ  ಪಟ್ಟಣ. ಇಲ್ಲಿ ಶಾತವಾಹನರು ಆಳ್ವಿಕೆ ನಡೆಸಿದ್ದರು.

ಜೂನ್‌ನಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಅಮರಾವತಿಯನ್ನು ರಾಜಧಾನಿಯಾಗಿ ಘೋಷಿಸಲಿದ್ದಾರೆ ಎನ್ನಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top