ಮೇವ್: ಡಾ.ಬಿ.ಆರ್ ಅಂಬೇಡ್ಕರ್ ಅವರ 125 ನೇ ಜನ್ಮ ದಿನೋತ್ಸವದ ಅಂಗವಾಗಿ ಅವರ ಜನ್ಮಸ್ಥಳ ಮಹಾರಾಷ್ಟ್ರ ಮೇವ್ಗೆ ತೆರಳಿ ಸಮಾರಂಭದಲ್ಲಿ ಭಾಗವಹಿಸಿದ ಮೋದಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಸಮಾನತೆ ಮತ್ತು ಗೌರವಕ್ಕಾಗಿ ಹೋರಾಡಿದವರು, ಅವರ ಜನ್ಮದಿನದಂದು ಅವರ ಹುಟ್ಟೂರಿಗೆ ಆಗಮಿಸುವ ಅವಕಾಶ ನನಗೆ ಸಿಕ್ಕಿದ್ದು ನನ್ನ ಅದೃಷ್ಟ. ಈ ಸ್ಥಳಕ್ಕೆ ನನ್ನ ಸೆಲ್ಯೂಟ್ ಎಂದಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅವರೊಬ್ಬ ಗುರಿ ಹೊಂದಿದ ವಿದ್ವಾಂಸ ಎಂದು ಬಣ್ಣಿಸಿದ ಮೋದಿ, ಅಸಮಾನತೆಯ ವಿರುದ್ಧ ಜೀವನದುದ್ದಕ್ಕೂ ಹೋರಾಟ ನಡೆಸಿದರು ಎಂದರು.
’ಹಲವಾರು ಅವಮಾನಗಳನ್ನು ಎದುರಿಸಿದರೂ ಸಂವಿಧಾನ ರಚನೆಯ ವೇಳೆ ಅವರು ಯಾರ ಮೇಲೂ ಪ್ರತಿಕಾರ ತೀರಿಸಲು ಮುಂದಾಗಿಲ್ಲ, ಇದು ಅವರ ಶ್ರೇಷ್ಠತೆಯನ್ನು ತೋರಿಸುತ್ತದೆ’ ಎಂದರು.
’ಗ್ರಾಮ ಉದಯ್ ಸೇ ಭಾರತ್ ಉದಯ್’ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ, ನಮ್ಮ ಗ್ರಾಮಗಳ ಅಡಿಪಾಯವನ್ನು ಗಟ್ಟಿಗೊಳಿಸುವ ಅಗತ್ಯತೆ ಇದೆ’ ಎಂದರು.
ಈ ವರ್ಷದ ಬಜೆಟ್ನ್ನು ರೈತರಿಗೆ ಮತ್ತು ಗ್ರಾಮಗಳಿಗೆ ಅರ್ಪಿಸಲಾಗಿದೆ ಎಂದರು.
ಅಂಬೇಡ್ಕರ್ ಅವರಿಗೆ ಸಂಬಂಧಪಟ್ಟ ಐದು ಸ್ಥಳ (ಪಂಚತೀರ್ಥ)ಗಳನ್ನು ಅಭಿವೃದ್ಧಿ ಪಡಿಸದ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.