ನವದೆಹಲಿ: ಬ್ಯಾಂಕುಗಳಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಹೊಂದಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರ ಪಾಸ್ಪೋರ್ಟ್ನ್ನು ಅಮಾನತುಗೊಳಿಸಲಾಗಿದೆ.
ಮಲ್ಯ ಅವರ ಪಾಸ್ಪೋರ್ಟ್ನ್ನು ಅಮಾನತುಗೊಳಿಸುವಂತೆ ಜಾರಿ ನಿರ್ದೇಶನಾಲಯ ದೆಹಲಿಯ ಪಾಸ್ಪೋಟ್ ಕಛೇರಿಗೆ ಸೂಚನೆ ನೀಡಿತ್ತು. ಅದರಂತೆ ಅವರ ಪಾಸ್ಪೋರ್ಟ್ ೪ ವಾರಗಳ ಅಮಾನತುಗೊಂಡಿದೆ.
ಮಲ್ಯ ಅವರನ್ನು ಬಂಧಿಸುವಂತೆಯೂ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದೆ.
ಬ್ಯಾಂಕುಗಳಿಂದ 9 ಸಾವಿರ ಕೋಟಿ ಸಾಲವನ್ನು ಪಡೆದು ಅದನ್ನು ಮರುವಪಾವತಿ ಮಾಡದೆ ಲಂಡನ್ನಲ್ಲಿ ವಾಸ್ತವ್ಯ ಹೂಡಿದ ಮಲ್ಯ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.