ಇಟನಗರ್: ಅರುಣಾಚಲ ಪ್ರದೇಶದ ತವಂಗ್ ಪ್ರದೇಶದಲ್ಲಿ ಶುಕ್ರವಾರ ಭೂಕುಸಿತ ಸಂಭವಿಸಿದ್ದು, 16 ಮಂದಿ ಮೃತರಾಗಿದ್ದಾರೆ.
ತವಂಗ್ನ ಫಮ್ಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.16 ಮಂದಿಯ ಮೃತದೇಹ ಹೊರ ತೆಗೆಯಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಈ ಘಟನೆಗೆ ಸಂತಾಪ ಸೂಚಿಸಿದ್ದಾರೆ.
ತವಂಗ್ ಏರಿಯಾ ಚೀನಾ ಗಡಿ ಸಮೀಪದಲ್ಲಿದೆ, ನಿರಂತರ ಮಳೆಯಾಗುತ್ತಿದ್ದ ಕಾರಣದಿಂದಾಗಿ ಭೂಕುಸಿತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.