ಮುಂಬಯಿ: 2006ರ ಮಾಲೇಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರದ ಕೊರತೆಯಿಂದಾಗಿ ಎಲ್ಲಾ 8 ಆರೋಪಿಗಳನ್ನು ಮುಂಬಯಿ ಕೋರ್ಟ್ ದೋಷಮುಕ್ತಗೊಳಿಸಿ, ಬಿಡುಗಡೆ ಆದೇಶ ನೀಡಿದೆ.
ಸಾಕ್ಷ್ಯಾಧಾರದ ಕೊರತೆಯಿಂದಾಗಿ ಪ್ರಕರಣದ 8 ಮಂದಿ ಮುಸ್ಲಿಂ ಆರೋಪಿಗಳನ್ನು ದೋಷಮುಕ್ತಗೊಳಿಸಿ ಜಸ್ಟೀಸ್ ವಿವಿ ಪಾಟೀಲ್ ತೀರ್ಪು ನೀಡಿದ್ದರು.
9 ಮಂದಿ ಆರೋಪಿಗಳಲ್ಲಿ ಓರ್ವ ಸಾವನ್ನಪ್ಪಿದ್ದು, 2011ರಲ್ಲಿ 6 ಮಂದಿಗೆ ಜಾಮೀನಿನ ಮೇರೆಗೆ ಬಿಡುಗಡೆಗೊಳಿಸಿತ್ತು. ಇನ್ನಿಬ್ಬರು ಮುಂಬಯಿ 7/11ರ ದಾಳಿ ಪ್ರಕರಣದ ದೋಷಿಯಾಗಿದ್ದರು.
ಭಯೋತ್ಪಾದನಾ ನಿಗ್ರಹ ತಂಡ ಮೊದಲು ಈ ಪ್ರಕರಣದ ತನಿಖೆ ನಡೆಸಿದ್ದು, ೯ ಮಂದಿ ಸಿಮಿ ಉಗ್ರ ಸಂಘಟನೆಯ ಯುವರನ್ನು ಬಂಧಿಸಿತ್ತು. ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು.
ಮಾಲೇಗಾಂವ್ನ ಒಂದು ಮಸೀದಿ ಬಳಿಯ ಮುಸ್ಲಿಂರ ಸ್ಮಶಾನದಲ್ಲಿ ಈ ಸ್ಫೋಟ ಸಂಭವಿಸಿದ್ದು, 37 ಮಂದಿ ಸಾವನ್ನಪ್ಪಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.