ನವದೆಹಲಿ: ನರೇಂದ್ರ ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕೊಲೆ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ಗೆ ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ತಿರುಗೇಟು ನೀಡಿದ್ದಾರೆ.
ಕಟುಕರು ಎಂದಿಗೂ ಬೋಧಕರಾಗಲು ಸಾಧ್ಯವಿಲ್ಲ, 100 ಕಾಂಗ್ರೆಸ್ಸೇತರ ಸರ್ಕಾರವನ್ನು ಕಾಯ್ದೆ 356ರ ಅನ್ವಯ ವಜಾಗೊಳಿಸಿರುವ ಕಾಂಗ್ರೆಸ್ ಈಗ ಬಿಜೆಪಿಯನ್ನು ಟೀಕಿಸುತ್ತಿರುವುದು ಹಾಸ್ಯಸ್ಪದ ಎಂದು ನಾಯ್ಡು ಹೇಳಿದ್ದಾರೆ.
ಕೇರಳದ ಮೊದಲ ಚುನಾಯಿತ ಇಎಂಎಸ್ ನಂಬೂದರಿಪಾದ್ ಸರ್ಕಾರವನ್ನು ಬಹುಮತವಿದ್ದರು ಕಾಂಗ್ರೆಸ್ 1959 ರಲ್ಲಿ ವಜಾಗೊಳಿಸಿದ ಪ್ರಕರಣವನ್ನು ಅವರು ನೆನಪಿಸಿದರು.
ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿರುವುದನ್ನು ವಿರೋಧಿಸಿ ಕಲಾಪಕ್ಕೆ ಕಾಂಗ್ರೆಸ್ ಅಡ್ಡಿಪಡಿಸುತ್ತಾ ಇರುವ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.