ನವದೆಹಲಿ: ಭಯಾನಕ ಉಗ್ರ ಸಂಘಟನೆ ಲಷ್ಕರ್-ಇ-ತೋಯ್ಬಾ ಭಾರತದ ವಿರುದ್ಧ ದಾಳಿಗಳನ್ನು ನಡೆಸುವ ಸಲುವಾಗಿಯೇ ಹೆಚ್ಚು ಹೆಚ್ಚು ಪಾಕಿಸ್ಥಾನಿ ಯುವಕರನ್ನು ತನ್ನ ಸಂಘಟನೆಗೆ ನೇಮಕ ಮಾಡಿಕೊಳ್ಳುತ್ತಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಭಾರತದಲ್ಲಿ ಹೆಚ್ಚಿನ ಉಗ್ರ ಕೃತ್ಯಗಳನ್ನು ನಡೆಸಬೇಕೆಂದು ಪಾಕಿಸ್ಥಾನ ಯುವಕರನ್ನು ನೇಮಿಸಿಕೊಂಡು ಅವರಿಗೆ ತರಬೇತಿಯನ್ನು ನೀಡುತ್ತಿದೆ ಎಂದು ಸಚಿವ ಹರಿಭಾಯ್ ಪಾರ್ಥಿಸಾರಥಿ ಚೌಧುರಿ ಅವರು ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದನಾ ಶಿಬಿರಗಳು ನಡೆಯುತ್ತಿವೆ, ಈ ಶಿಬಿರಗಳನ್ನು ಲಷ್ಕರ್, ಜೈಶೇ ಮೊಹಮ್ಮದ್, ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗಳು ನಡೆಸುತ್ತಿವೆ ಎಂಬುದಕ್ಕೆ ಸ್ಪಷ್ಟ ಗುಪ್ತಚರ ಮಾಹಿತಿಗಳು ಲಭಿಸಿವೆ ಎಂದು ಅವರು ಹೇಳಿದ್ದಾರೆ.
ಯುವಕರನ್ನು ತರಬೇತಿಗೊಳಿಸಿ ಭಾರತದೊಳಕ್ಕೆ ಒಳನುಸುಳುವಂತೆ ಮಾಡಿ ಉಗ್ರ ಕೃತ್ಯಗಳನ್ನು ನಡೆಸುವಂತೆ ಮಾಡುವ ಪ್ರಯತ್ನಗಳನ್ನು ಈ ಸಂಘಟನೆಗಳು ನಿರಂತರವಾಗಿ ಮಾಡುತ್ತಾ ಬರುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.