News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೆಳ್ತಂಗಡಿ : ಒಳಚರಂಡಿ ವ್ಯವಸ್ಥೆಯನ್ನು ಸುಸಜ್ಜಿತಗೊಳಿಸಲು ಸ್ಥಳ ಮಂಜೂರು

ಬೆಳ್ತಂಗಡಿ : ಪಟ್ಟಣ ಪಂಚಾಯತ್‌ನ ಒಳಚರಂಡಿ ವ್ಯವಸ್ಥೆಯನ್ನು ಸುಸಜ್ಜಿತಗೊಳಿಸಲು ಅಗತ್ಯವಾದ ಅರ್ಧ ಎಕರೆ ಸ್ಥಳವನ್ನು ಬೆಳ್ತಂಗಡಿ ಕೃಷಿ ಇಲಾಖೆಯ ಬಳಿ ಸರಕಾರ ಮಂಜೂರು ಮಾಡಿದೆ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ತಿಳಿಸಿದರು.ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಸಾಮಾನ್ಯ ಸಭೆ ಮಂಗಳವಾರ ಪ.ಪಂ. ಅಧ್ಯಕ್ಷೆ ಮುಸ್ತರ್‌ಜಾನು ಮೆಹಬೂಬ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕಾಗಿ ಭೂಸ್ವಾಧೀನಕ್ಕಾಗಿ ಸರಕಾರದಿಂದ ರೂ. 50 ಲಕ್ಷ ಮಂಜೂರುರಾಗಿದ್ದು ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

24dlNAGARAPANCHAYATH

13ನೇ ಹಣಕಾಸು ಯೋಜನೆಯಡಿ ಪಟ್ಟಣ ಪಂಚಾಯತ್‌ಗೆ 30.22 ಲಕ್ಷ ರೂ ಅನುದಾನ ಬಂದಿದೆ. ಅದರಲ್ಲಿ ಶೇ. 25 ರಷ್ಟು, ಘನತ್ಯಾಜ್ಯ ವಿಲೇವಾರಿಗೆ, ಶೇ. 25 ರಷ್ಟನ್ನು ಮಳೆ ನೀರು ಚರಂಡಿ ವ್ಯವಸ್ಥೆಗೆ, ಶೇ. 20ರಷ್ಟು ನೀರು ಸರಬರಾಜು ನಿರ್ವಹಣೆಗೆ, ಶೇ. 15 ರನ್ನು ದಾರಿ ದೀಪ ನಿರ್ವಹಣೆಗೆ, ಶೇ. 5 ರಷ್ಟು ಉದ್ಯಾನವನ ಅಭಿವೃದ್ಧಿಗೆ, ಶೇ. 5 ರಷ್ಟು ಕಛೇರಿ ನಿರ್ವಹಣೆಗೆ ಮೀಸಲಿಡಬೇಕಾಗಿದೆ ಎಂದು ಸಭೆಗೆ ತಿಳಿಸಲಾಯಿತು. ಅದರಂತೆ ಈ ಅನುದಾನದ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಯಿತು.

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತ ನಿಧಿ ಕೇಂದ್ರ ಎಲ್ಲಾ ಸೌಲಭ್ಯಗಳೊಂದಿಗೆ ಆರಂಭಗೊಂಡಿದೆ, ಅದನ್ನು ಸರಿಯಾಗಿ ನಿರ್ವಹಿಸದಿರುವುದರಿಂದ ಅದರ ಪ್ರಯೋಜನ ಜನರಿಗೆ ಸಿಗುತ್ತಿಲ್ಲ ಎಂದು ಸದಸ್ಯ ಜಗದೀಶ್ ಗಮನ ಸೆಳೆದರು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಭೆಯಲ್ಲಿ ನಗರದ ವಿವಿಧ ಅಭಿವೃಧ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಿತು. ಟೆಂಡರ್‌ಗಳಿಗೆ ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷೆ ನಳಿನಿ ವಿಶ್ವನಾಥ್, ಮುಖ್ಯಾಧಿಕಾರಿ ಜೆಸಿಂತಾ ಲೂಯಿಸ್, ಅಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top