News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಂಟ್ವಾಳ :ಬುಶ್ರಾ ಆತ್ಮಹತ್ಯೆ ಪ್ರಕರಣ-ವರದಕ್ಷಿಣೆ ಕಿರುಕುಳ ಆರೋಪ

Bantwala NEWSಬಂಟ್ವಾಳ : ಮೆಲ್ಕಾರ್ ಸಮೀಪದ ಬೋಗೋಡಿಯಲ್ಲಿ ಸೋಮವಾರ ರಾತ್ರಿ ನಡೆದ ಬುಶ್ರಾ ಆತ್ಮಹತ್ಯೆ ಪ್ರಕರಣಕ್ಕೆ ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ಕಾರಣವೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬುಶ್ರಾ ಅವರ ತಂದೆ ಗೂಡಿನ ಬಳಿ ನಿವಾಸಿ ಇಬ್ರಾಹಿಂ ಅವರು, ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು, ತನ್ನ ಪುತ್ರಿಯ ಸಾವಿಗೆ ಪತಿ ಇರ್ಫಾನ್ ಹಾಗೂ ಆತನ ತಾಯಿ ಕಾರಣ ಎಂದು ಆರೋಪಿಸಿದ್ದಾರೆ.

ಕಳೆದ 3 ವರ್ಷದ ಹಿಂದೆ ಇರ್ಪಾನ್ ಗೆ ಬುಶ್ರಾಳನ್ನು ವಿವಾಹ ಮಾಡಿಕೊಡಲಾಗಿತ್ತು. ವಿವಾಹದ ಸಂದರ್ಭ 20 ಪವನ್ ಚಿನ್ನ ಹಾಗೂ 2 ಲಕ್ಷದ ಬೇಡಿಕೆ ಇಟ್ಟಿದ್ದು, ಈ ಪೈಕಿ 17 ಪವನ್ ಚಿನ್ನ ಹಾಗೂ 2 ಲಕ್ಷ ನಗದು ವರದಕ್ಷಿಣೆಯಾಗಿ ನೀಡಲಾಗಿತ್ತು.

3 ಪವನ್ ಚಿನ್ನ ನೀಡಲು ಬಾಕಿ ಇದ್ದುದರಿಂದ ಪತಿ ಇರ್ಫಾನ್ ಹಾಗೂ ಅತ್ತೆ ನೀಡಿದ ಕಿರುಕುಳದಿಂದ ಬೇಸತ್ತು ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top