ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಹೊಸದಾಗಿ ಸೇರ್ಪಡೆಯಾಗಿರುವ ನೂತನ ಐಎಎಸ್ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ್ದಾರೆ.
ಧೈರ್ಯಶಾಲಿಗಳಾಗಿ ಮತ್ತು ಪ್ರಾಮಾಣಿಕರಾಗಿ ಸೇವೆ ಸಲ್ಲಿಸಿ, ಅಧಿಕಾರದ ದರ್ಪವನ್ನು ತಲೆಗೇರಿಸಿಕೊಳ್ಳದೆ ಕಾರ್ಯ ನಿರ್ವಹಿಸಿ ಎಂದು ಈ ವೇಳೆ ಅವರು ಯುವ ಐಎಎಸ್ ಅಧಿಕಾರಿಗಳಿಗೆ ಕರೆ ನೀಡಿದರು.
3 ತಿಂಗಳ ಅವಧಿಯಲ್ಲಿ ನಿಮಗೆ ನಿಮ್ಮ ಕೌಶಲ್ಯ ಮತ್ತು ಕಲಿಯುವಿಕೆಯನ್ನು ಹೆಚ್ಚಿಸುವ ಅವಕಾಶವಿದೆ. ಹೀಗಾಗಿ ಈ ಮೂರು ತಿಂಗಳನ್ನು ಸದುಪಯೋಗಪಡಿಸಿಕೊಳ್ಳಿ. ಅಲ್ಲದೆ ಕೆಲವೊಂದು ಸನ್ನಿವೇಶ ಮತ್ತು ಸುತ್ತಲ ಪರಿಸರದ ಬಗ್ಗೆ ಸೂಕ್ಷ್ಮ ಸಂವೇದಕರಾಗಿ ಕಾರ್ಯ ನಿರ್ವಹಿಸಬೇಕು. ಇದರಿಂದ ದೇಶದ ಜನರೊಂದಿಗೆ ಸಂಪರ್ಕ ಹೊಂದಿರಲು ಸಾಧ್ಯವಾಗುತ್ತದೆ ಎಂದು ಕಿವಿ ಮಾತು ಹೇಳಿದರು.
2014 ರ ಬ್ಯಾಚ್ನ ಈ ಅಧಿಕಾರಿಗಳು ಕಳೆದ ಸೋಮವಾರದಿಂದ ಕೇಂದ್ರದ 48 ಸರ್ಕಾರಿ ಇಲಾಖೆಗಳಲ್ಲಿ ಉಪಕಾರ್ಯದರ್ಶಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ತಮ್ಮ ಕೇಡರ್ ರಾಜ್ಯಗಳನ್ನು ಹೊರತುಪಡಿಸಿ ಕೇಂದ್ರ ಸರ್ಕಾರದಲ್ಲಿ ವೃತ್ತಿ ಮಾಡುತ್ತಿರುವ ಐಎಎಸ್ ಅಧಿಕಾರಿಗಳ ೨ನೇ ಬ್ಯಾಚ್ ಇದಾಗಿದೆ.
3 ತಿಂಗಳ ಅವಧಿಗೆ ಇವರು ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಸಚಿವಾಲಯ ಮತ್ತು ಇಲಾಖೆಗಳ ಯೋಜನೆಗಳ ಬಗ್ಗೆ ಅವರಿಗೆ ವಿಶೇಷ ಜವಾಬ್ದಾರಿಯನ್ನು ನೀಡಲಾಗಿದೆ.
ಅನುಭವಕ್ಕಾಗಿ ಇವರುಗಳನ್ನು ಕೇಂದ್ರದ ಇಲಾಖೆಗಳಿಗೆ ನಿಯೋಜನೆ ಮಾಡಲಾಗಿದೆ. ಪ್ರಸ್ತುತ ನಿಯಮದಂತೆ ತಮ್ಮ ಕೇಡರ್ನಲ್ಲಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕವಷ್ಟೇ ಐಎಎಸ್ ಅಧಿಕಾರಿಗಳು ಕೇಂದ್ರ ಸರ್ಕಾರದಲ್ಲಿ ನಿಯೋಜನೆಗೊಳ್ಳುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.