ನವದೆಹಲಿ : ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಅವರು ಬುಧವಾರ ಇಸ್ಲಾಮಾಬಾದ್ಗೆ ತೆರಳಲಿದ್ದು ಪಠಾಣ್ಕೋಟ್ ವಾಯುನೆಲೆಯ ದಾಳಿ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆಯಿದೆ.
7ನೇ ಸಾರ್ಕ್ ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಅವರು ಇಸ್ಲಾಮಾಬಾದ್ಗೆ ತೆರಳುತ್ತಿದ್ದಾರೆ.
ಭಯೋತ್ಪಾದನಾ ಕೃತ್ಯಗಳನ್ನು ತಡೆಯುವಲ್ಲಿ ಪಾಕಿಸ್ಥಾನದ ಅಸಹಾಕಾರ, ತನ್ನ ನೆಲದಲ್ಲಿನ ಉಗ್ರರಿಗೆ ಅದು ನೀಡುತ್ತಿರುವ ಬೆಂಬಲ ಮುಂತಾದ ವಿಷಯಗಳ ಬಗ್ಗೆ ಅವರು ಅಲ್ಲಿ ವಿಷಯ ಪ್ರಸ್ತಾಪ ಮಾಡುವ ಸಾಧ್ಯತೆಯಿದೆ.
ಸಿಂಗ್ ಅವರು ಪಠಾಣ್ಕೋಟ್ ದಾಳಿಯ ಬಳಿಕ ಪಾಕಿಸ್ಥಾನಕ್ಕೆ ತೆರಳುತ್ತಿರುವ ಭಾರತದ ಮೊದಲ ಸಚಿವ. ಕಾಶ್ಮೀರ ಬೂದಿ ಮುಚ್ಚಿದ ಕೆಂಡದಂತಿರುವ ಈ ಸಮಯದಲ್ಲಿ ರಾಜ್ನಾಥ್ ಅಲ್ಲಿಗೆ ಭೇಟಿ ಕೊಡುತ್ತಿರುವುದು ವಿಶೇಷ.
ಸಾರ್ಕ್ ಶೃಂಗ ಸಭೆಯಲ್ಲಿ ಅವರು ನಕಲಿ ನೋಟುಗಳು ಮತ್ತು ಮಾದಕದ್ರವ್ಯ ಸಾಗಣೆ ಬಗ್ಗೆ ವಿಷಯ ಪ್ರಸ್ತಾಪಿಸುವ ಸಾಧ್ಯತೆ ಇದೆ.
ಭೇಟಿಯ ವೇಳೆ ಪಾಕ್ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.