ಮಂಗಳೂರು : ರಾಜ್ಯದಲ್ಲಿ ಅಹಿಂದ ಹೆಸರಲ್ಲಿ ಅಧಿಕಾರ ಹಿಡಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದುಳಿದ ವರ್ಗಗಳನ್ನು ಸಂಪೂರ್ಣ ಕಡೆಗಣಿಸಿರುತ್ತಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರಕಾರವನ್ನು ಅಧಿಕಾರಕ್ಕೆ ತರಲು ಇಂದಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಬೇಲೂರು ಲಕ್ಷ್ಮಣ ಕರೆ ನೀಡಿದರು.
ಅವರು ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯ ಅಕ್ಷಯ ಸಭಾಂಗಣದಲ್ಲಿ ದಿನಾಂಕ 3-8-2016 ರಂದು ನಡೆದ ದ.ಕ. ಹಾಗೂ ಉಡುಪಿ ಜಿಲ್ಲೆಗಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಭೆಯಲ್ಲಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರುಗಳಾದ ಶ್ರೀ ಶಿವಕುಮಾರ್, ಕಿರಣ್ ಕುಮಾರ್ ಉಡುಪಿ, ರಾಜ್ಯ ಕಾರ್ಯದರ್ಶಿಗಳಾದ ಸತ್ಯಜಿತ್ ಸುರತ್ಕಲ್, ರವಿಚಂದ್ರ ಮಂಗಳೂರು, ದ.ಕ.ಜಿಲ್ಲಾ ಅಧ್ಯಕ್ಷರಾದ ಸಂಜೀವ ಮಠಂದೂರು, ಪ್ರಧಾನ ಕಾರ್ಯದರ್ಶಿ ಕ್ಯಾ| ಬ್ರಿಜೇಶ್ ಚೌಟ, ಹಿಂದುಳಿದ ವರ್ಗಗಳ ಮೋರ್ಚಾದ ದ.ಕ.ಜಿಲ್ಲಾಧ್ಯಕ್ಷರಾದ ಸುರೇಶ್ ಕಣೆಮರಡ್ಕ, ಉಡುಪಿ ಜಿಲ್ಲಾಧ್ಯಕ್ಷರಾದ ರಾಜೇಶ್ ಕಾವೇರಿ ಉಪಸ್ಥಿತರಿದ್ದರು.
ಮೋರ್ಚಾದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ವಿನೋದ್ ಎಸ್.ಸಾಲ್ಯಾನ್ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.