ನವದೆಹಲಿ: ಪಾಂಡಿಚೆರಿ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳ ಬಿಕ್ಕಟ್ಟಿನ ಕುರಿತು ರಾಜ್ಯಸಭೆಯಲ್ಲಿ ಚರ್ಚಿಸಲಾಗಿದ್ದು, ವಿಶ್ವವಿದ್ಯಾಲಯಗಳಲ್ಲಿ ಯಾವುದೇ ರಾಷ್ಟ್ರ ವಿರೋಧಿ ಚಟುವಟಿಕೆಗಳು ನಡೆಯುವುದನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಶೂನ್ಯ ವೇಳೆಯಲ್ಲಿ ಸಿಪಿಐ ಶಾಸಕ ಡಿ. ರಾಜಾ ಸಲ್ಲಿಸಿದ ವಿಚಾರಕ್ಕೆ ಉತ್ತರಿಸಿದ ನಾಯ್ಡು, ಜವಾಹರ್ಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ಹಾಗೂ ಹೈದರಾಬಾದ್ ವಿಶ್ವವಿದ್ಯಾಲಯ (ಯುಒಎಚ್)ಗಳಲ್ಲಿ ಸಂಭವಿಸಿದ ವಿದ್ಯಾರ್ಥಿಗಳ ಗಲಭೆಗಳು ಪುನರಾವರ್ತನೆಗೊಳ್ಳುವುದನ್ನು ಸರ್ಕಾರ ವಿರೋಧಿಸುತ್ತದೆ. ಇದಕ್ಕೆ ಸರ್ಕಾರ ಅನುಮತಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಪಾಂಡಿಚೆರಿ ವಿಶ್ವವಿದ್ಯಾಲಯ ಆವರಣದಲ್ಲಿ ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ ಉಲ್ಲೇಖಿಸಿ ಮತ್ತು ಹೈದರಾಬಾದ್ ವಿವಿಯ ವಿದ್ಯಾರ್ಥಿ ರೋಹಿತ್ ವೆಮುಲಾ ಆತ್ಮಹತ್ಯೆಯನ್ನು ವೈಭವೀಕರಿಸಿ ಬರೆಯಲಾಗಿದ್ದ ವಿದ್ಯಾರ್ಥಿ ಮ್ಯಾಗಜಿನ್ನ್ನು ಕಾಲೇಜಿನ ಉಪಕುಲಪತಿಗಳು ನಿಷೇಧಿಸಿದ ಬಳಿಕ ಗೊಂದಲದ ವಾತಾವರವರಣ ಉಂಟಾಗಿದೆ.
ವಿಶ್ವವಿದ್ಯಾಲಯದ ಬಲಪಂಥೀಯ ವಿದ್ಯಾರ್ಥಿಗಳು ಮ್ಯಾಗಜಿನ್ ನಿಷೇಧಿಸುವಂತೆ ಆಗ್ರಹಿಸಿದ್ದು, ಆಡಳಿತ ಮಂಡಳಿ ಇದಕ್ಕೆ ಒಪ್ಪಿಗೆ ನೀಡಿ ಮ್ಯಾಗಜಿನ್ನ್ನು ನಿಷೇಧಿಸಿದೆ.
ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತಿದೆ. ಜೆಎನ್ಯು, ಹೈದರಾಬಾದ್, ನಂತರ ಪಾಂಡಿಚೆರಿಗಳಲ್ಲಿ ಗಲಭೆ ಉಂಟಾಗಿದ್ದು, ಸರ್ಕಾರ ಏಕೆ ಹಸ್ತಕ್ಷೇಪ ಮಾಡುತ್ತಿದೆ ಎಂದು ಪ್ರಶ್ನಿಸಿದ ಡಿ. ರಾಜಾ, ವಿದ್ಯಾರ್ಥಿಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅವಕಾಶ ನೀಡಿ ಎಂದು ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.