ಝಾನ್ಸಿ: ಕಾನ್ಪುರದಲ್ಲಿ ದಲಿತ ಯುವಕನೊಬ್ಬ ಪೊಲೀಸ್ ಠಾಣೆಯಲ್ಲೇ ಮೃತಪಟ್ಟಿದ್ದು, ಪೊಲೀಸ್ ಪೋಸ್ಟ್ನಲ್ಲಿನ ಎಲ್ಲಾ 14 ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.
ಕಮಲ್ ವಾಲ್ಮೀಕಿ ಎಂಬ 25 ವರ್ಷದ ಯುವಕ ಕಳ್ಳತನದ ಬಗ್ಗೆ ಪ್ರಶ್ನೆ ಮಾಡಿದ ಎಂಬ ಕಾರಣಕ್ಕೆ ಎರಡು ದಿನಗಳ ಹಿಂದೆ ಪೊಲೀಸರು ಆತನನ್ನು ಕಸ್ಟಡಿಗೆ ಎಳೆದು ತಂದಿದ್ದರು. ಆದರೆ ಇಂದು ಆತ ಮೃತಪಟ್ಟಿದ್ದಾನೆ ಎಂಬುದಾಗಿ ಆತನ ಕುಟುಂಬಿಕರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಆತನ ದೇಹ ಪೊಲೀಸ್ ಸ್ಟೇಶನ್ ಒಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪೊಲೀಸರ ಹಲ್ಲೆಂದಾಗಿಯೇ ಆತ ಮೃತಪಟ್ಟಿದ್ದಾನೆ ಎಂದು ಕುಟುಂಬಿಕರು ಆರೋಪಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಇನ್ನಷ್ಟೇ ಬರಬೇಕಿದೆ.
ಈ ಘಟನೆ ಪೊಲೀಸರ ವಿರುದ್ಧ ಜನಾಕ್ರೋಶ ಭುಗಿಲೇಳುವಂತೆ ಮಾಡಿದ್ದು, ಸದ್ಯಕ್ಕೆ ಪೊಲೀಸರನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಅವರ ವಿರುದ್ಧ ಕಿಡ್ನ್ಯಾಪ್ ಪ್ರಕರಣವನ್ನೂ ದಾಖಲು ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.