ನವದೆಹಲಿ : ದೇಶದಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಎತ್ತಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹಸಚಿವ ರಾಜ್ನಾಥ್ ಸಿಂಗ್ ಅವರು ದಲಿತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ದಲಿತ ಸಮುದಾಯಕ್ಕೆ ಸಹಾಯ ಮಾಡಲು ಕೇಂದ್ರ ಕಟಿಬದ್ಧವಾಗಿದೆ. ಆದರೆ ಈ ಬಗ್ಗೆ ರಾಜಕೀಯ ಕೆಸರೆರಚಾಟ ನಡೆಸುವುದರಿಂದ ಸಮಸ್ಯೆಯನ್ನು ನಿವಾರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ದಲಿತರ ವಿಷಯವನ್ನು ರಾಜಕೀಯಗೊಳಿಸಬಾರದು. ಇದು ನಮಗೆಲ್ಲರಿಗೂ ಸವಾಲಿನ ವಿಷಯವಾಗಿದೆ. ಆರೋಪ ಮತ್ತು ಪ್ರತ್ಯಾರೋಪಗಳಿಂದ ಯಾವುದೇ ಲಾಭವಿಲ್ಲ ಎಂದು ಚರ್ಚೆಯ ವೇಳೆ ರಾಜ್ನಾಥ್ ಸಿಂಗ್ ಪ್ರತಿಪಕ್ಷಗಳಿಗೆ ಕಿವಿಮಾತು ಹೇಳಿದ್ದಾರೆ.
ಮಹಾತ್ಮಾಗಾಂಧಿ, ಸ್ವಾಮಿ ವಿವೇಕಾನಂದ, ಡಾ. ಬಿ. ಆರ್. ಅಂಬೇಡ್ಕರ್ ಅವರು ಜಾತಿ ಪದ್ಧತಿಯ ವಿರುದ್ಧವಾಗಿ ನೀಡಿದ ಸಂದೇಶಗಳನ್ನು ಉಲ್ಲೇಖಿಸಿದ ರಾಜ್ನಾಥ್ ಸಿಂಗ್ ಸ್ವಾತಂತ್ರ್ಯ ಸಿಕ್ಕಿ ೭೦ ವರ್ಷಗಳ ಬಳಿಕವೂ ದಲಿತರ ಮೇಲಿನ ದೌರ್ಜನ್ಯದ ಬಗ್ಗೆ ಚರ್ಚೆ ನಡೆಸಬೇಕಾಗಿ ಬಂದಿರುವುದು ನಮ್ಮ ದುರಾದೃಷ್ಟ ಎಂದಿದ್ದಾರೆ.
ದೇಶದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಒಪ್ಪಿಕೊಂಡಿರುವ ಅವರು ದೇಶದಲ್ಲಿ ಜಾತಿ ಪದ್ಧತಿ ಭದ್ರವಾಗಿ ತಳವೂರಿರುವ ಕಾರಣ ಸರಕಾರ ಒಂದರಿಂದಲೇ ಈ ಸಮಸ್ಯೆಯ ನಿವಾರಣೆ ಸಾಧ್ಯವಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.