ನ್ಯೂಯಾರ್ಕ್: ಭಾರತದ ಕರ್ನಾಟಕ ಶಾಸ್ತ್ರೀಯ ಸಂಗೀತ ದಂತಕಥೆ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಗೌರವಾರ್ಥವಾಗಿ ಅವರ ಜನ್ಮಶತಮಾನೋತ್ಸವವನ್ನು ಗುರುತಿಸಲು ವಿಶ್ವಸಂಸ್ಥೆ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಿದೆ.
ವಿಶ್ವಸಂಸ್ಥೆಯ ಅಂಚೆ ಆಡಳಿತ ಸುಬ್ಬುಲಕ್ಷ್ಮಿ ಅವರ ಜನ್ಮದಿನವನ್ನು ಗುರುತಿಸಲು ಮುಂದಿನ ವಾರ ಅಂಚೆಚೀಟಿಗಳನ್ನು ಬಿಡುಗಡೆ ಮಾಡಲಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ನಿಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತದ ಸ್ವಾತಂತ್ರ್ಯ ದಿನವನ್ನು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಆಚರಿಸಲಾಗುತ್ತಿದ್ದು, ಆಗಸ್ಟ್ 15ರಂದು ವಿಶ್ವಸಂಸ್ಥೆಯ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಗಣ್ಯರ ಎದುರು ಆಸ್ಕಾರ್ ವಿಜೇತ ಎ.ಆರ್. ರೆಹ್ಮಾನ್ ಅವರು ವಿಶೇಷ ಕಾರ್ಯಕ್ರಮ ನೀಡಲಿದ್ದಾರೆ.
ಅತ್ಯುನ್ನತ ನಾಗರಿಕ ಗೌರವ ಹಾಗೂ ಭಾರತ ರತ್ನ ಪ್ರಶಸ್ತಿ ಪಡೆದ ಭಾರತದ ಮೊಟ್ಟಮೊದಲ ಸಂಗೀತಗಾರ್ತಿ ಸುಬ್ಬುಲಕ್ಷ್ಮಿ ಅವರನ್ನು ಮೊದಲ ಬಾರಿಗೆ ಅಕ್ಟೋಬರ್ 1966ರಲ್ಲಿ ವಿಶ್ವಸಂಸ್ಥಯ ಮಹಾಸಭೆಯಲ್ಲಿ ಸಂಗೀತ ಕಾರ್ಯಕ್ರಮ ನೀಡುವಂತೆ ಅಂದಿನ ಯುಎನ್ ಕಾರ್ಯದರ್ಶಿ ದಿ. ಯು. ಥೆಂಟ್ ಆಹ್ವಾನಿಸಿದ್ದರು.
ಸುಬ್ಬುಲಕ್ಷ್ಮಿ ಅವರು ವಿಶ್ವಸಂಸ್ಥೆಯಲ್ಲಿ ಕಾರ್ಯಕ್ರಮ ನೀಡಿದ ಮೊದಲ ಕಲಾವಿದೆ ಆಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.