ಇಸ್ಲಾಮಾಬಾದ್ : ಬಲೂಚ್ ಸ್ಟೂಡೆಂಟ್ ಆರ್ಗನೈಸೇಷನ್ ಮುಖ್ಯಸ್ಥೆ ಕರಿಮಾ ಬಲೂಚ್ ಅವರು ರಕ್ಷಾಬಂಧನದ ಅಂಗವಾಗಿ ಪ್ರದಾನಿ ನರೇಂದ್ರ ಮೋದಿಯವರಿಗೆ ಶುಭಾಶಯಗಳನ್ನು ತಿಳಿಸಿದ್ದು, ಮೋದಿ ನಮ್ಮ ಸಹೋದರನಿದ್ದಂತೆ ಎಂದು ಬಣ್ಣಿಸಿದ್ದಾರೆ.
ಬಲೂಚಿಸ್ಥಾನದಲ್ಲಿ ನಡೆಯುತ್ತಿರುವ ಯುದ್ಧ ಅಪರಾಧ, ನರಹತ್ಯೆ, ಮಾನವ ಹಕ್ಕು ಉಲ್ಲಂಘನೆಗಳ ಬಗ್ಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಧ್ವನಿಯಾಗುವಂತೆ ಕರಿಮಾ ಅವರು ಮೋದಿಗೆ ಮನವಿ ಮಾಡಿದ್ದಾರೆ.
ರಕ್ಷಾಬಂಧನದ ಅಂಗವಾಗಿ ಟ್ವಿಟರ್ನಲ್ಲಿ ವೀಡಿಯೋ ಒಂದನ್ನು ಶೇರ್ ಮಾಡಿರುವ ಕರೀಮಾ, ‘ಈ ಶುಭದಿನದಂದು ನಿಮ್ಮನ್ನು ತಲುಪುತ್ತಿದ್ದೇನೆ. ನಿಮ್ಮನ್ನು ಸಹೋದರ ಎಂದು ನಾವು ಪರಿಗಣಿಸಿದ್ದೇವೆ. ನೀವು ಬಲೂಚಿಸ್ಥಾನ ಮತ್ತು ಸಹೋದರರನ್ನು ಕಳೆದುಕೊಂಡ ಬಲೂಚಿ ಸಹೋದರಿಯರ ಧ್ವನಿಯಾಗಬೇಕು’ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮೋದಿ ಬಲೂಚಿಸ್ಥಾನ ಹೋರಾಟ ಕಾರ್ಯಕ್ಕೆ ಬೆಂಬಲ ನೀಡಿದ್ದರು. ಅಲ್ಲದೇ ಅಲ್ಲಿ ನಡೆಯುತ್ತಿರುವ ಮಾನವ ಹಕ್ಕು ಉಲ್ಲಂಘನೆ ಬಗ್ಗೆ ಧ್ವನಿ ಎತ್ತಿದ್ದರು. ಬಲೂಚಿಸ್ಥಾನ, ಗಿರಿಗಿಟ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಜನತೆ ನನಗೆ ಹಲವಾರು ಬಾರಿ ಧನ್ಯವಾದವನ್ನು ಹೇಳಿದ್ದು, ನಾನು ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದರು.
ಪಾಕಿಸ್ಥಾನದ ವಶದಲ್ಲಿರುವ ಬಲೂಚಿಸ್ಥಾನದಲ್ಲಿ ಹಲವಾರು ವರ್ಷಗಳಿಂದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯುತ್ತಿದೆ. ಆದರೆ ಆ ಹೋರಾಟವನ್ನು ಪಾಕಿಸ್ಥಾನ ಹತ್ತಿಕ್ಕುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.