ಲಕ್ನೋ : 2017 ರಲ್ಲಿ ಚುನಾವಣೆ ಎದುರಿಸುತ್ತಿರುವ ಉತ್ತರ ಪ್ರದೇಶದಲ್ಲಿ ಭಾರೀ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ.
ಇತ್ತೀಚೆಗೆ ಸಮಾಜವಾದಿ ಪಕ್ಷದ ಶಾಸಕರೊಬ್ಬರು ಕಾಶಿಯಲ್ಲಿನ ಬಿಜೆಪಿ ನಾಯಕರೊಬ್ಬರನ್ನು ಭೇಟಿಯಾಗಿ ತಮ್ಮ ಪಕ್ಷದ ಐವರು ನಿಮ್ಮ ಪಕ್ಷಕ್ಕೆ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಬಿಎಸ್ಪಿಯ ಕೆಲವರು ಬಿಜೆಪಿ ಸೇರಲು ಆಸಕ್ತರಾಗಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಈ ಬೆಳವಣಿಗೆ ಚುನಾವಣಾ ಅಖಾಡವಾಗಿರುವ ಯುಪಿಯಲ್ಲಿ ಭಾರೀ ಸುದ್ದಿಯನ್ನು ಮಾಡಿದೆ.
ಮೂಲಗಳ ಪ್ರಕಾರ ಸುಮಾರು 80 ಶಾಸಕರು, ಇದರಲ್ಲಿ ಅರ್ಧದಷ್ಟು ಮಂದಿ ಬಿಎಸ್ಪಿ ಶಾಸಕರು ಬಿಜೆಪಿಗೆ ಸೇರಲು ತಯಾರಿ ಆರಂಭಿಸಿದ್ದಾರೆ.
ಆದರೆ ಬಿಜೆಪಿ ಇವರಲ್ಲಿ 20-25 ಮಂದಿಯನ್ನು ಮಾತ್ರ ಪಕ್ಷಕ್ಕೆ ಬರಮಾಡಿಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.
ಎಸ್ಪಿ, ಬಿಎಸ್ಪಿಯ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಬಳಿಕ ಅವರನ್ನು ತಮ್ಮ ಪಕ್ಷ ಇದುವರೆಗೆ ಗೆಲ್ಲದ ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಸುವ ತಂತ್ರಗಾರಿಕೆಯನ್ನು ಬಿಜೆಪಿ ರೂಪಿಸಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.