ಇಂದೋರ್: ಯೋಗಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಆಯುರ್ವೇದದ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಮಧ್ಯಪ್ರದೇಶ ಸರ್ಕಾರ ಪಿತಾಂಪುರ್ ಕೈಗಾರಿಕಾ ಪ್ರದೇಶದಲ್ಲಿ ಅಂದಾಜು 10 ಕೋಟಿ ರೂ.ಗೆ 40 ಎಕರೆ ಜಮೀನು ಮಂಜೂರು ಮಾಡಿದೆ.
ಪ್ರತಿ ಎಕರೆಗೆ 25 ಲಕ್ಷ ರೂ. ಆಧಾರದಲ್ಲಿ 40 ಎಕರೆ ಜಮೀನಿಗೆ 10 ಕೋಟಿ ರೂ. ಸರ್ಕಾರಕ್ಕೆ ಪಾವತಿಸುವಂತೆ ಕಂಪನಿಗೆ ಪತ್ರದ ಮೂಲಕ ಕೋರಲಾಗಿದೆ ಎಂದು ಮಧ್ಯಪ್ರದೇಶ ಉದ್ಯೋಗ ಕೇಂದ್ರ ವಿಕಾಸ್ ನಿಗಮ್ ಇದರ ಎಂ.ಡಿ. ಕುಮಾರ್ ಪುರುಷೋತ್ತಮ್ ಹೇಳಿದ್ದಾರೆ.
ಕಂಪನಿ ಮುಂದಿನ ಮೂರು ವರ್ಷದಲ್ಲಿ 500 ಕೋಟಿ ರೂ. ಹೂಡಿಕೆ ಮಾಡುವ ಯೋಜನೆ ಹೊಂದಿದ್ದು, ಈ ಘಟಕದ ಮೂಲಕ 5000 ಮಂದಿ ನೇರ ಮತ್ತು ಪರೋಕ್ಷವಾಗಿ ಉದ್ಯೋಗ ಪಡೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಧ್ಯಪ್ರದೇಶ ಸರ್ಕಾರ ಪತಂಜಲಿಯ ಆಹಾರ ಸಂಸ್ಕರಣ ಘಟಕಕ್ಕೆ ರಿಯಾಯಿತಿ ದರದಲ್ಲಿ ಭೂಮಿ ಒದಗಿಸುತ್ತಿದ್ದು, ಇತರ ಮೂಲಭೂತ ಸೌಲಭ್ಯಗಳನ್ನೂ ಒದಗಿಸಲಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.