ನವದೆಹಲಿ: ಈಗ ಭಾರತದ ನಾಗರಿಕರು ಯಾವುದೇ ಸಾಧಕರನ್ನು ಪ್ರತಿಷ್ಠಿತ ಪದ್ಮ ಪ್ರಶಸ್ತಿಗೆ ಶಿಫಾರಸ್ಸು ಮಾಡಬಹುದು. ಸರ್ಕಾರ ಇದರಲ್ಲಿ ಪಾರದರ್ಶಕತೆ ತರುವ ಮೂಲಕ, ಪ್ರಭಾವದಿಂದ ಮತ್ತು ಲಾಬಿ ಮೂಲಕ ನಾಮನಿರ್ದೇಶನ ಮಾಡುವುದನ್ನು ತಡೆಗಟ್ಟಲು ಸಾರ್ವಜನಿಕರಿಗೆ ಮುಕ್ತವಾಗಿ ನಾಮನಿರ್ದೇಶನ ಪ್ರಕ್ರಿಯೆಗೆ ಅನುಮತಿಸಿದೆ .
ಆನ್ಲೈನ್ ಮೂಲಕ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನ ಮಾಡುವವರು ತಮ್ಮ ದೃಢೀಕರಣಕ್ಕಾಗಿ ಆಧಾರ್ ಸಂಖ್ಯೆಯನ್ನು ಒದಗಿಸಬೇಕಿದೆ. ಭಾರತ ಸರ್ಕಾರ ಮೊದಲ ಬಾರಿಗೆ ಸಾಧಕರನ್ನು ನಾಮನಿರ್ದೇಶಿಸಲು ಜನರಿಗೆ ಪ್ರೋತ್ಸಾಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಮುಂದೆ ಇದು ಗಣ್ಯ ಆಡಳಿತಗಾರರ ನಿರ್ಬಂಧಗಳಿಂದ ದೂರ ಉಳಿಯಲಿದ್ದು, ರಾಷ್ಟ್ರೀಯ ಪ್ರಶಸ್ತಿಯು ಸಂಪೂರ್ಣ ಜನರ ಪ್ರಶಸ್ತಿಯಾಗಿ ಪರಿವರ್ತನೆಗೊಳ್ಳುವತ್ತ ಹೆಜ್ಜೆ ಇಟ್ಟಿದೆ. ನಾಮನಿರ್ದೇಶನ ಪ್ರಕ್ರಿಯೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವುದರಿಂದ ಸಮಾಜದಲ್ಲಿ ಗುರುತಿಸಲ್ಪಡದ ಸಾಧಕರನ್ನು ಗುರುತಿಸಲು ಸಹಾಯಕವಾಗಲಿದೆ ಎಂದು ಅದು ತಿಳಿಸಿದೆ.
ಕೇಂದ್ರ ಸರ್ಕಾರ ಈಗಾಗಲೇ 1,700 ಶಿಫಾರಸುಗಳನ್ನು ಸ್ವೀಕರಿಸಿದ್ದು, ನಾಮನಿರ್ದೇಶನಕ್ಕೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.