ನವದೆಹಲಿ: ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರು ಸೆಪ್ಟೆಂಬರ್ 15ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ನೇಪಾಳದ ವಿದೇಶಾಂಗ ಸಚಿವ ಪ್ರಕಾಶ್ ಶರಣ್ ಮಹತ್ ಅವರನ್ನು ಭಾತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೋಮವಾರ ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಎರಡೂ ಸಚಿವರು ಪರಸ್ಪರ ಹಿತಾಸಕ್ತಿ ವಿಚಾರಗಳು, ಎರಡೂ ದೇಶಗಳ ನಡುವಿನ ಉನ್ನತ ವಿನಿಮಯಗಳು, ದ್ವಿಪಕ್ಷೀಯ ಸಂಬಂಧಗಳ ಮಾತುಕತೆ ನಡೆಸಿದ್ದಾರೆ ಎಂದು ವಿದೇಶಂಗ ಸಚಿವಾಲಯ ಹೇಳಿದೆ.
ಎರಡೂ ದೇಶಗಳ ನಡುವಿನ ಪರಸ್ಪರ ಬಂಡವಾಳ ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಆರ್ಥಿಕತೆ ಮತ್ತು ಅಭಿವೃದ್ಧಿ ಪಾಲುದಾರಿಕೆ, ಮೂಲಸೌಕರ್ಯ ಅಭಿವೃದ್ಧಿ, ಶಕ್ತಿ ಮತ್ತು ಜಲ ಸಂಪನ್ಮೂಲ, ಸಂಪರ್ಕ ಮತ್ತಿತರ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸುವ ಕುರಿತು ಮಾತುಕತೆ ನಡೆಸಿದ್ದಾರೆ.
ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ (ಪ್ರಚಂಡ) ಅಧಿಕಾರ ವಹಿಸಿದ ಬಳಿಕ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದು, ಸೆಪ್ಟೆಂಬರ್ 15ರಿಂದ ಮೂರು ದಿನಗಳ ಕಾಲ ಭಾರತದಲ್ಲಿ ಉಳಿಯಲಿದ್ದಾರೆ.
ಕೆ.ಪಿ. ಶರ್ಮಾ ಒಲಿ ಅವರು ಪದಚ್ಯುತಿಗೊಂಡ ನಂತರ ಪ್ರಚಂಡ ಅವರು ಆಗಸ್ಟ್ನಲ್ಲಿ ಅಧಿಕಾರ ಸ್ವೀಕರಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.