ಮಂಗಳೂರು : ಸ್ಮಾರ್ಟ್ ಸಿಟಿಗಳನ್ನು ನಿರ್ಮಿಸುವ 3ನೇ ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಮಂಗಳೂರು ನಗರ ಆಯ್ಕೆಯಾಗಿರುವುದಕ್ಕೆ ಭಾರತೀಯ ಜನತಾ ಪಾರ್ಟಿ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತದೆ. ಈ ಯೋಜನೆಯನ್ನು ಜಾರಿಗೆ ತಂದ ನಮ್ಮ ನೆಚ್ಚಿನ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿಯವರಿಗೆ, ಈ ಬಗ್ಗೆ ಮುತುವರ್ಜಿ ವಹಿಸಿ ಕೆಲಸ ಮಾಡಿದ ಕೇಂದ್ರ ನಗರಾಭಿವೃದ್ಧಿ ಸಚಿವರಾದ ಸನ್ಮಾನ್ಯ ವೆಂಕಯ್ಯ ನಾಯ್ಡು ಅವರಿಗೆ ಹಾಗೂ ಮಂಗಳೂರಿನ ನೆಚ್ಚಿನ ಸಂಸದರಾದ ಸನ್ಮಾನ್ಯ ನಳಿನ್ ಕುಮಾರ್ ಕಟೀಲ್ರವರಿಗೆ ಹಾಗೂ ಸಂಬಂಧಪಟ್ಟ ಇಲಾಖೆಗೆ ಈ ಸಂದರ್ಭದಲ್ಲಿ ಮಂಗಳೂರಿನ ಜನತೆಯ ಪರವಾಗಿ ಬಿಜೆಪಿ ನಗರ ದಕ್ಷಿಣ ಅಧ್ಯಕ್ಷರಾದ ವೇದವ್ಯಾಸ ಕಾಮತ್ ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ. ಈ ಯೋಜನೆಯು ಶೀಘ್ರವಾಗಿ ಅನುಷ್ಠಾನಗೊಂಡು ಮಂಗಳೂರಿನ ಸರ್ವತೋಮುಖ ಅಭಿವೃದ್ಧಿಯಾಗಲೆಂದು ಆಶಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ದೇಶದಲ್ಲಿ 100 ಸ್ಮಾರ್ಟ್ ಸಿಟಿಗಳನ್ನು ನಿರ್ಮಿಸುವ ಸನ್ಮಾನ್ಯ ನರೇಂದ್ರ ಮೋದಿಯವರ ಕನಸಿನ ಯೋಜನೆಯ 3ನೇ ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಮಂಗಳೂರು ನಗರ ಆಯ್ಕೆಯಾಗಿರುವುದಕ್ಕೆ ಸಂತೋಷಪಡುತ್ತೇವೆ. ಸ್ಮಾರ್ಟ್ ಸಿಟಿಯಿಂದ ಮಂಗಳೂರಿನ ಮೂಲಭೂತ ಸೌಕರ್ಯಗಳಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಉದ್ಯೋಗ ಅವಕಾಶಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಲಿದ್ದು, ಇದು ಭವಿಷ್ಯದಲ್ಲಿ ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಲಿದೆ. ಈ ಯೋಜನೆಯನ್ನು ಜಾರಿಗೆ ತಂದ ನಮ್ಮ ನೆಚ್ಚಿನ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿಯವರಿಗೆ, ಈ ಬಗ್ಗೆ ಮುತುವರ್ಜಿ ವಹಿಸಿ ಕೆಲಸ ಮಾಡಿದ ಕೇಂದ್ರ ನಗರಾಭಿವೃದ್ಧಿ ಸಚಿವರಾದ ಸನ್ಮಾನ್ಯ ವೆಂಕಯ್ಯ ನಾಯ್ಡು ಅವರಿಗೆ ಹಾಗೂ ಮಂಗಳೂರಿನ ನೆಚ್ಚಿನ ಸಂಸದರಾದ ಸನ್ಮಾನ್ಯ ನಳಿನ್ ಕುಮಾರ್ ಕಟೀಲ್ರವರಿಗೆ ಈ ಸಂದರ್ಭದಲ್ಲಿ ಮಂಗಳೂರಿನ ಜನತೆಯ ಪರವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ ಎಂದು ರೂಪಾ ಡಿ. ಬಂಗೇರಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.