ಹೈದರಾಬಾದ್: ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಲ್ಲಿ ಜನರ ರಕ್ಷಣೆ ಮತ್ತು ನೆರವು ಕಾರ್ಯಾಚರಣೆಗಾಗಿ 550 ಸಿಬ್ಬಮದಿಗಳನ್ನೊಳಗೊಂಡ 17 ತಂಡಗಳನ್ನು ಕೇಂದ್ರ ಸರ್ಕಾರ ನಿಯೋಜನೆ ಮಾಡಿದೆ.
ಆಂಧ್ರ, ತೆಲಂಗಾಣ ರಾಜ್ಯಗಳು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನೆರೆಯಲ್ಲಿ ಸಿರುಕಿರುವವರ ರಕ್ಷಣೆಗೆ ಕೇಂದ್ರ ರಕ್ಷಣಾ ಪಡೆಗಳು 60 ದೋಣಿಗಳು ಮತ್ತು ಸಹಾಯಕ ಸಿಬ್ಬಂದಿಗಳನ್ನು ನಿಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ಆಂಧ್ರ ಪ್ರದೇಶದ ಗುಂಟೂರ್, ನೆಲ್ಲೊರ್, ವಿಶಾಖಪಟ್ಟಣಂ, ಶ್ರೀಕಾಕುಳಂನ ನೆರೆ ಪೀಡಿದ ಪ್ರದೇಶಗಳಲ್ಲಿ 32 ರಬ್ಬರ್ ಬೋಟ್ಗಳು, ಸಂಪರ್ಕ ಸಾಧನಗಳೊಂದಿಗೆ 309 ರಕ್ಷಣಾ ಸಿಬ್ಬಂದಿಗಳ 9 ತಂಡಗಳನ್ನು ಪೂರ್ವ ನಿಯೋಜನೆ ಮಾಡಲಾಗಿದೆ.
ತೆಲಂಗಾಣದ ಮೇಢಕ್, ನಿಜಾಮಾಬಾದ್ ಮತ್ತು ಹೈದರಾಬಾದ್ಗಳಲ್ಲಿ ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದ್ದು, ಗೋದಾವರಿ ನದಿ ತೀರದ ೫ ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ.
ಮಂಗಳವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯನ್ನು ರದ್ದುಗೊಳಿಸಲಾಗಿದೆ.
ಕರ್ನಾಟಕದ ಬೀದರ್, ಕಲಬುರ್ಗಿ ಮತ್ತು ಬೆಂಗಳೂರುಗಳಲ್ಲಿ ಕೇಂದ್ರ ರಕ್ಷಣಾ ಪಡೆ ಸಿಬ್ಬಂದಿಗಳ ಮೂರು ತಂಡವನ್ನು ನಿಯೋಜಿಸಲಾಗಿದೆ. ಎನ್ಡಿಆರ್ಎಫ್ ತಂಡ ಕಲಬುಗಿಯಲ್ಲಿ ರಕ್ಷಣಾ ಕಾರ್ಯಾಚಣೆ ನಡೆಸಿದ್ದು, ನೆರೆಗೆ ಸಿಲುಕಿದ್ದ 21 ಮಂದಿಯನ್ನು ರಕ್ಷಿಸಲಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.