ಇಸ್ಲಾಮಾಬಾದ್: ಉರಿ ಉಗ್ರ ದಳಿ ಹಿನ್ನೆಲೆಯಲ್ಲಿ ಭರತದಿಂದ ಪಾಕಿಸ್ಥಾನಕ್ಕೆ ಹರಿಯುತ್ತಿರುವ ಸಿಂಧು ನದಿ ತಡೆಗಟ್ಟಲು ಭಾರತ ಚಿಂತನೆ ನಡೆಸುತ್ತಿದ್ದು, ಇದರ ವಿರುದ್ಧ ಪಾಕಿಸ್ಥಾನ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿದೆ.
ಪಾಕಿಸ್ಥಾನದ ಅಟಾರ್ನಿ ಜನರಲ್ ಅಶ್ತಾರ್ ಆಸಪ್ ಅಲಿ ನೇತೃತ್ವದ ನಿಯೋಗ ವಾಷಿಂಗ್ಟನ್ನ ವಿಶ್ವ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಪಾಕ್ ಅಧಿಕಾರಿಗಳನ್ನು ಭೇಟಿ ಮಾಡಿ ಭಾರತದೊಂದಿಗೆ ೧೯೬೦ರ ಸಿಂಧು ನದಿ ನೀರು ಒಪ್ಪಂದ ಪರಿಚ್ಛೇದ ೯ರ ನಿರ್ಣಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.
ಸಿಂಧು ನದಿ ನೀರು ಹರಿಯುವಿಕೆಯನ್ನು ಭಾರತ ತಡೆಯಲು ಯತ್ನಿಸುತ್ತಿದೆ. ಇದಕ್ಕೆ ತಡೆಯೊಡ್ಡಬೇಕು ಎಂದು ಪಾಕ್ ಮನವಿ ಮಾಡಿದೆ.
ಆಗಸ್ಟ್ ೧೯ರಂದು ಪಾಕಿಸ್ಥಾನ ನೀಲಮ್ ಮತ್ತು ಚೇನಾಬ್ ನದಿಯಲ್ಲಿ ಭಾರತದ ಕಿಶನ್ಗಂಗಾ ಜಲವಿದ್ಯುತ್ ಯೋಜನೆಯ ವಿವಾದದ ಬಗ್ಗೆ ನಿರ್ಣಯ ಕೈಗೊಳ್ಳುವಂತೆ ಭಾರತಕ್ಕೆ ಮನವಿ ಮಾಡಿತ್ತು. ಇದೀಗ ಪಾಕಿಸ್ಥಾನ ಈ ಯೋಜನೆಯ ವಿರುದ್ಧ ಅರ್ಜಿ ಸಲ್ಲಿಸಿದೆ.
ಅರ್ಜಿ ವಿಚಾರಣೆಗೆ ಮತ್ತು ವಿಲೇವಾರಿಗೆ ಮೂವರು ನ್ಯಾಯಾಧೀಶರನ್ನು ನೇಮಿಸುವಂತೆ ಪಾಕಿಸ್ಥಾನ ವಿಶ್ವಬ್ಯಾಂಕ್ಗೆ ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.