ನವದೆಹಲಿ: ಜಮ್ಮು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ನಡೆದ ಉಗ್ರರ ದಾಳಿ ವಿರುದ್ಧ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ನಡೆಸಿದ ಸೀಮಿತ ದಾಳಿ ಕುರಿತು ಕೆಲವು ರಾಜಕಾರಣಿಗಳು ಪ್ರಶ್ನಿಸುತ್ತಿರುವುದು ದುರದೃಷ್ಟಕರ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಭಾರರತ ದೈರ್ಯಶಾಲಿ ಸೈನಿಕರು ನಡೆಸಿದ ಸೀಮಿತ ದಾಳಿ ಬಗ್ಗೆ ರಾಜಕಾರಣಿಗಳು ಪಾಕಿಸ್ಥಾನದ ಪರ ಮಾತನಾಡುತ್ತ ಪಾಕ್ ಭಾಷೆಯನ್ನು ಬಳಸುತ್ತಿರುವುದು ದುರದೃಷ್ಟಕರ. ಅವರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳದೇ ನೀಡುವ ಬೇಜವಾಬ್ದಾರಿ ಹೇಳಿಕೆಗಳು ಸೇನೆಯ ಸ್ಥೈರ್ಯವನ್ನು ಕುಗ್ಗಿಸುತ್ತದೆ ಹಾಗೂದೇಶದ ಜನತೆಗೆ ನೋವುಂಟು ಮಾಡುತ್ತದೆ ಎಂದು ನಾಉಡು ಹೇಳಿದ್ದಾರೆ.
ಇಂತಹ ಹೇಳಿಕೆಗಳು ಅವರಿಗೆ ಭಾರತೀಯ ಸೇನೆಯ ಮೇಲಿರುವ ಅಪನಂಬಿಕೆಯನ್ನು ತೋರಿಸುತ್ತದೆ. ದೇಶಕ್ಕೆ ತೋದರೆ ನೀಡುವ ಶಕ್ತಿಗಳ ವಿರುದ್ಧ ಭಾರತ ಒಗಟ್ಟಿನಿಂದ ಎದುರಿಸಬೇಕು ಎಮದು ನಾಯ್ಡು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ನಕಲಿ. ಇದಕ್ಕೆ ಕೇಂದ್ರ ಖಚಿತ ಸಾಕ್ಷಿ ನೀಡಬೇಕೆಂಬ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವಹೇಳನಕಾರಿ ಹೇಳಿಕೆ ವಿರುದ್ಧ ಎಲ್ಲೆಡೆ ವಿರೋಧಗಳು ಕೇಳಿ ಬರುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.