ನವದೆಹಲಿ: ಇಂದು ದೇಶದಾದ್ಯಂತ ಧಾರ್ಮಿಕ ಹಬ್ಬ ವಿಜಯದಶಮಿಯನ್ನು ಅತೀ ಉತ್ಸಾಹದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಜನತೆಗೆ ಶುಭ ಕೋರಿದ್ದಾರೆ.
ಶತಮಾನಗಳಿಂದ ಪಾಲಿಸುತ್ತಿರುವ ನೈತಿಕ ಮತ್ತು ಋಜುತ್ವ ಪಥವನ್ನು ಜನರು ಅನುಸರಿಸುವಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಮ್ಮ ಸಂದೇಶದಲ್ಲಿ ಕೋರಿದ್ದಾರೆ.
ವಿಜಯದಶಮಿ ಹಬ್ಬ ದೇಶದಲ್ಲಿ ಶಾಂತಿ, ಸಮೃದ್ಧಿ, ಸಾಮರಸ್ಯವನ್ನು ತರಲಿ ಎಂದು ಆಶಿಸುವುದಾಗಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹೇಳಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ರಾವಣ, ಮೇಘನಾಥ, ಕುಂಭಕರಣರ ಬೊಂಬೆ ಸುಡುವ ಮೂಲಕ ಸಾಂಪ್ರದಾಯಿಕ ರಾಮಲೀಲಾ ಕೊನೆಗೊಳ್ಳಲಿದೆ.
ಇದೇ ವೇಳೆ ದೆಹಲಿ ಪೊಲೀಸ್ ರಾಜಧಾನಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವಿಸ್ತೃತ ಭದ್ರತಾ ವ್ಯವಸ್ಥೆ ಏರ್ಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.