ಲಡಾಖ್: ಶಿಕ್ಷಕರಲ್ಲಿ ಯುವ ವಿದ್ಯಾರ್ಥಿಗಳ ಮನಸ್ಸುಗಳನ್ನು ಬದಲಾಯಿಸುವ ಸಾಮರ್ಥ್ಯ ಇದ್ದು, ಶಿಕ್ಷಣವು ಪ್ರಗತಿ ಮತ್ತು ಸುಧಾರಣೆ ತರುವಲ್ಲಿ ಮೂಲಭೂತವಾದ ಪಾತ್ರವನ್ನು ನಿರ್ವಹಿಸುತ್ತದೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕ್ಷಕರು ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿದ್ದು, ಇದನ್ನು ಅರಿತುಕೊಂಡು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (DIET) ಲೇಹ್ನಲ್ಲಿ ಸರ್ವ ಶಿಕ್ಷಾ ಅಭಿಯಾನದ ಅಡಿಯಲ್ಲಿ ಶಿಕ್ಷಕರ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
DIET ಅಡಿಯಲ್ಲಿ ತರಬೇತಿ ಪಡೆದು ಕಾರ್ಯ ನಿರ್ವಹಿಸಿದ ೫-೬ ಸಂಪನ್ಮೂಲ ವ್ಯಕ್ತಿಗಳು ಇತರ ಶಿಕ್ಷಕರಿಗೆ ತರಬೇತಿ ನೀಡಿದರು.
ಇದು ಶಿಕ್ಷಕರಿಗೆ ಪ್ರಾಯೋಗಿಕ ತರಬೇತಿ ನೀಡುವಲ್ಲಿ ಕೇಂದ್ರೀಕರಿಸಿದೆ.
ಐದು ದಿನಗಳ ಶಿಬಿರದಲ್ಲಿ ಶಿಕ್ಷಣ ನೀಡುವ ವಿಧಾನಗಳು, ತಂತ್ರಗಳನ್ನು ಕಲಿಸಲಾಗಿದ್ದು, ಶಿಕ್ಷಕರನ್ನು ಪ್ರತ್ಯೇಕವಾಗಿ ಕೇಂದ್ರೀಕರಿಸಲಾಗಿದೆ. ಇದರಿಂದ ಶಿಕ್ಷಕರು ಹೆಚ್ಚಿನ ಲಾಭ ಪಡೆಯಲಿದ್ದು, ಈ ತರಬೇತಿ ಘಟಕ ಅನನ್ಯ, ವಿದ್ಯಾರ್ಥಿ ಸ್ನೇಹಿ ಮತ್ತು ಕಲಿಸಲು ಸುಲಭವಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೆ. ಅಂಗಮೋ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.