ಕಾಠ್ಮಂಡು: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನವೆಂಬರ್ 2ರಿಂದ ಮೂರು ದಿನಗಳ ಕಾಲ ನೇಪಾಳಕ್ಕೆ ಭೇಟಿ ನೀಡಲಿದ್ದು, ಬುಧವಾರ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ನೇಪಾಳ ಅಧ್ಯಕ್ಷೆ ಬಿಧ್ಯಾ ದೇವಿ ಭಂಡಾರಿ ಜೊತೆ ಹಲವು ವಿಚಾರಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಮುಖರ್ಜಿ, ಭಾರತ-ನೇಪಾಳ ನಡುವಿನ ಪ್ರಸ್ತುತ ಸಂಬಂಧಗಳು ತೃಪ್ತಿ ತಂದಿದೆ. ಎರಡೂ ರಾಷ್ಟ್ರಗಳ ರಾಜಕೀಯ ನಾಯಕರ ನಡುವಿನ ಪರಸ್ಪರ ಹೊಂದಾಣಿಕೆ ಉತ್ತಮವಾಗಿದೆ ಎಂದು ನೇಪಾಳ ವಿದೇಶಾಂಗ ಸಚಿವಾಲಯದ ವಕ್ತಾರ ಭರತ್ರಾಜ್ ಪೌದ್ಯಾಲ್ ಹೇಳಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭೇಟಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಭದ್ರಗೊಳಿಸುವ ಬಗ್ಗೆ ಭರವಸೆ ವ್ಯಕ್ತಪಡಿಸಲಾಗಿದೆ.
ನವದೆಹಲಿ ಶೀಘ್ರದಲ್ಲೇ ಭಂಡಾರಿ ಅವರ ಆತಿಥ್ಯ ವಹಿಸುವುದನ್ನು ಮುಂದೆ ನೋಡುತ್ತಿರುವುದಾಗಿ ಮುಖರ್ಜಿ ಹೇಳಿದ್ದಾರೆ.
ಸಭೆಯ ಬಳಿಕ ಮುಖರ್ಜಿ ಅವರು ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತೀಯ ರಾಯಭಾರಿ ರಂಜಿತ್ ರೇ ಆತಿಥ್ಯದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.