ಚೆನ್ನೈ: ತಮ್ಮ ಪ್ರಚಾರದ ಸಲುವಾಗಿ ಪ್ರತಿಯೊಂದು ಸಮಸ್ಯೆಗಳಿಗೂ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಬಳಸುವುದನ್ನು ನಿಲ್ಲಿಸಿ ಎಂದು ವಿರೋಧ ಪಕ್ಷಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಚೆನ್ನೈನಲ್ಲಿ ನಿರ್ಮಾಣ ಸಂಘಗಳ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ನಾಯ್ಡು ಅವರು, ಇತ್ತೀಚೆಗೆ ವಿಪಕ್ಷಗಳು ತಮ್ಮ ಪ್ರಚಾರಕ್ಕಾಗಿ ಎಲ್ಲ ಸಂದರ್ಭಗಳಲ್ಲೂ ಪ್ರಧಾನಿ ಮೋದಿ ಅವರ ಹೆಸರನ್ನು ಬಳಸುತ್ತಿವೆ. ಪ್ರತಿಯೊಂದು ವಿಷಯಕ್ಕೂ ಅವರನ್ನು ದೂಷಿಸುವುದು ಒಂದು ರೀತಿಯ ಫ್ಯಾಷನ್ ಆಗಿದೆ. ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ಹೆಸರನ್ನು ದೂಷಿಸಲು ಬಳಸಲಾಗುತ್ತಿತ್ತು. ಯಾವುದೇ ಸಂದರ್ಭದಲ್ಲಿ ಒಂದು ಪ್ರದೇಶದಲ್ಲಿ ಮಳೆ, ಬೆಳೆ ಇಲ್ಲದಿದ್ದರೆ, ರಾಜಕೀಯ ವಿಚಾರಗಳಲ್ಲಿ ಆರ್ಎಸ್ಎಸ್ನ್ನು ದೂರಲಾಗುತ್ತಿತ್ತು. ಆದರೆ ಇದೀಗ ಮೋದಿಯವರನ್ನು ಹೆಸರನ್ನು ಬಳಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ಸಾಧನೆಗಳನ್ನು ಪ್ರಶಂಶಿಸಿದ ನಾಯ್ಡು ಅವರು, ಪ್ರಧಾನಿ ಮೋದಿ ಅವರು ದೇಶಕ್ಕಾಗಿ ಭಾರತಕ್ಕೆ ತೊಂದರೆ ನೀಡುತ್ತಿರುವ ಚೀನಾ ಮತ್ತು ಪಾಕಿಸ್ಥಾನದ ಜೊತೆ ವ್ಯವಹಾರ ನಡೆಸುತ್ತಿದ್ದಾರೆ. ಆದರೆ ಕೆಲವರು ಮಾತ್ರ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಜನರ ವರ್ತನೆಯಲ್ಲಿ ಬದಲಾವಣೆ ಆಗಬೇಕಿದೆ. ಜನರಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರಲು ಪ್ರಧಾನಿ ಅವರು ಹೊಸ ಯೋಜನೆಗಳನ್ನು ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಒಆರ್ಒಪಿ ಜಾರಿಯಾಗಿಲ್ಲ, ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.