ಮುಂಬಯಿ: ದುಬಾರಿ ಮುಖಬೆಲೆಯ ನೋಟುಗಳ ರದ್ದತಿ ಬಳಿಕ ಭಯೋತ್ಪಾದಕರಿಗೆ ಹಣ ಸಾಗಾಟಕ್ಕೆ ಹೊಡೆತ ಬಿದ್ದಿದೆ ಎಂದು ಹೇಳಿದ ಬೆನ್ನಲ್ಲೇ, ಮೋದಿ ಸರ್ಕಾರದ ನಡೆಯಿಂದ ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ, ಹಿಂಸಾಚಾರ ಪ್ರಕರಣಗಳು ಕಡಿಮೆಯಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಧೈರ್ಯಶಾಲಿ ನಡೆಗೆ ಧನ್ಯವಾದ ಸೂಚಿಸಿದ ಪರಿಕ್ಕರ್, ಇದು ಮಾದಕವ್ಯಸನ ನಿಯಂತ್ರಿಸಲಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲು ರೂ.500 ಮತ್ತು ಇತರ ಹಿಂಸಾಚಾರ ಸೃಷ್ಟಿಸಲು ರೂ.1000 ನೀಡಲಾಗುತ್ತಿತ್ತು. ಪ್ರಧಾನಿ ಮೋದಿ ಅವರ ನಡೆ ಭಯೋತ್ಪಾದಕರಿಗೆ ಹಣ ಸಾಗಾಟವನ್ನು ಅಂತ್ಯಗೊಳಿಸಿದೆ ಎಂದು ಅವರು ಹೇಳಿದ್ದಾರೆ.
ರಕ್ಷಣಾ ಸಚಿವನಾಗಿ ಅಧಿಕಾರಕ್ಕೆ ಬಂದಾಗ ಕೇಂದ್ರ ಸಶಸ್ತ್ರ ಸೇನಾ ಪಡೆ ಒಪ್ಪಂದ ಮತ್ತು ಪರಿಹಾರದಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಯೋಚಿಸಿರಲಿಲ್ಲ. 17.38 ಎಕರೆ ಪ್ರದೇಶ ರಕ್ಷಣಾ ಪಡೆಯ ಹತೋಟಿಯಲ್ಲಿದೆ. ಭಾರತದಲ್ಲಿ ಭದ್ರತೆ ಅತೀ ದೊಡ್ಡ ಸ್ಥಾನವನ್ನು ಹೊಂದಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.