ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ನಂತರ ಲೋಕಸಭಾ ಕಲಾಪವನ್ನು ಗುರುವಾರ 11 ಗಂಟೆಗೆ ಮುಂದೂಡಲಾಗಿದೆ.
ರಾಜ್ಯಸಭಾ ಕಲಾಪ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ನೋಟು ನಿಷೇಧ ವಿರೋಧಿಸಲು ಕೆಲವು ಪಕ್ಷಗಳು ಮುಂದಾಗಿವೆ.
ಕೇಂದ್ರ ಸರ್ಕಾರದ ಅಯೋಜಿತ ಮತ್ತು ಹಠಾತ್ ನಿರ್ಧಾರವನ್ನು ವಿರೋಧಿಸಲು ಕಾಂಗ್ರೆಸ್, ಬಿಎಸ್ಪಿ, ಎಸ್ ಮತ್ತು ಟಿಎಂಸಿ ಪಕ್ಷಗಳು ನಿರ್ಧರಿಸಿವೆ. ಇನ್ನು ಆಮ್ ಆದ್ಮಿ ಪಕ್ಷ ಕೂಡ ಸರ್ಕಾರದ ನೋಟು ನಿಷೇಧವನ್ನು ವಿರೋಧಿಸುತ್ತಿದ್ದು, ಕೇಂದ್ರ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ಪೈಪೋಟಿ ನಡೆಯುವ ಸಾಧ್ಯತೆ ಇದೆ.
ಈ ನಡುವೆ ಪಶ್ಚಿಮ ಬಂಗಾಲ ಮುಖ್ಯಮಂತ್ರ ಮಮತಾ ಬ್ಯಾನರ್ಜಿ ಅವರು ಸರ್ಕಾರದ ನೋಟು ನಿಷೇಧದ ನಿರ್ಧಾರವನ್ನು ವಿರೋಧಿಸಿ ಮಂಗಳವಾರ ಇಂದು ಪ್ರಟಿಭಟನಾ ರ್ಯಾಲಿ ಹಮ್ಮಿಕೊಂಡಿದೆ. ರ್ಯಾಲಿ ಬಳಿಕ ಬ್ಯಾನರ್ಜಿ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸದ್ದಾರೆ ಎನ್ನಲಾಗಿದೆ.
ಅಧಿವೇಶನಕ್ಕೂ ಮುನ್ನ ಪತ್ಕರ್ತರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ ಅವರು ಈ ಬಾರಿಯ ಚಳಿಗಾಲದ ಅಧಿವೇಶನ ಇಂದು ಆರಂಭಗೊಳ್ಳಲಿದೆ. ಕಳೆದ ಬಾರಿಯ ಅಧಿವೇಶನ ಐತಿಹಾಸಿಕ ಜಿಎಸ್ಟಿ ಮಸೂದೆ ಅಂಗೀಕಾರಕ್ಕೆ ಸಾಕ್ಷಿಯಾಗಿತ್ತು. ಸರ್ಕಾರ ಎಲ್ಲ ವಿಚಾರಗಳನ್ನು ಚರ್ಚಿಸಲು ಸಿದ್ಧವಿದೆ. ವಿವಿಧ ವಿಚಾರಗಳ ಬಗ್ಗೆ ಪಕ್ಷಗಳು ತಮ್ಮ ಅಭಿಪ್ರಾಯಗಳನ್ನು ಸೂಚಿಸಲಿವೆ. ಜನರ ಆಕಾಂಕ್ಷೆಗಳ ಬಗ್ಗೆ ಚರ್ಚಿಸಲಾಗುವುದು. ಬಹಿರಂಗ ಚರ್ಚೆಗೆ ಇದೊಂದು ಉತ್ತಮ ವೇದಿಕೆಯಾಗಲಿದೆ ಎಂದು ಹೇಳಿಸಿದ್ದಾರೆ.
ಈ ಬಾರಿಯ ಅಧಿವೇಶನದಲ್ಲಿ ಕಪ್ಪು ಹಣ, ಜಿಎಸ್ಟಿ ಜಾರಿ, ಆರೋಗ್ಯ ಸಂಬಂಧಿತ ಮಸೂದೆ, ಭ್ರಷ್ಟಾಚಾರ ತಡೆ ಮಸೂದೆ ಸೇರಿದಂತೆ ೯ ಮಸೂದೆಗಳನ್ನು ಕೇಂದ್ರ ಸರ್ಕಾರ ಮಂಡಿಸಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಬಿಜೆಪಿ ಸಚಿವರನ್ನು ಭೇಟಿಯಾಗಿದ್ದಾರೆ. ಲೋಕಸಭೆಯಲ್ಲಿ ವ್ಯಾಪಾರ ಸಲಹಾ ಸಮಿತಿ ಸಭೆ 11.15ಕ್ಕೆ ಆರಂಭಗೊಳ್ಳಲಿದ್ದು, ರಾಜ್ಯಸಭೆ ಮಧ್ಯಾಹ್ನ 1 ಗಂಟೆಗೆ ಆರಂಭಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.