ನವದೆಹಲಿ : ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕ್ ಸೈನ್ಯಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೈನಿಕರು ಪಾಕ್ ಸೈನ್ಯದ 7 ಸೈನಿಕರನ್ನು ಹತ್ಯೆಗೈದಿದ್ದರು. ಅದರಂತೆ ಪಾಕ್ ಸೈನ್ಯವು 11 ಜನ ಭಾರತೀಯ ಸೈನಿಕರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ಥಾನದ ಸೇನಾ ಮುಖ್ಯಸ್ಥ ಜನರಲ್ ರಹೀಲ್ ಷರೀಫ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಆದರೆ ಈ ಹೇಳಿಕೆಯನ್ನು ಭಾರತೀಯ ಸೇನೆ ನಿರಾಕರಿಸಿದೆ.
ನವೆಂಬರ್ 14, 15, 16 ರಂದು ನಡೆದ ಗಡಿಯಲ್ಲಿ ನಡೆದ ಅಪ್ರಚೋದಿತ ದಾಳಿಯ ಸಂದರ್ಭ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ಥಾನ 11 ಭಾರತೀಯ ಯೋಧರನ್ನು ಹತ್ಯೆಗೈದಿರುವುದಾಗಿ ಹೇಳಿದೆ. ಆದರೆ ಅಪ್ರಚೋದಿತ ದಾಳಿಯಲ್ಲಿ ಪಾಕ್ ಸೈನಿಕರಿಂದ ಯಾವುದೇ ಭಾರತೀಯ ಸೈನಿಕರ ಪ್ರಾಣಕ್ಕೆ ಹಾನಿಯಾಗಿಲ್ಲ ಎಂದು ಸೇನಾಧಿಕಾರಿ ಟ್ವೀಟ್ ಮಾಡಿದ್ದಾರೆ.
ಇದುವರೆಗೂ ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ನಡೆದ ಹೋರಾಟಗಳಲ್ಲಿ 40 ರಿಂದ 45 ಭಾರತೀಯ ಸೈನಿಕರನ್ನು ಹತ್ಯೆಗೈಯ್ಯಲಾಗಿದೆ. ಆದರೆ ಭಾರತೀಯ ಸೇನೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ. ಭಾರತ ಕೇವಲ ಎದೆಗಾರಿಕೆಯ ಪ್ರದರ್ಶನವನ್ನು ಮಾಡುತ್ತದೆ ಎಂದು ವ್ಯಂಗ್ಯವಾಗಿ ಮಾತನಾಡಿದ್ದಲ್ಲದೆ, ಪಾಕ್ 11 ಭಾರತಿಯ ಸೈನಿಕರನ್ನು ಹತ್ಯೆಗೈಯ್ದಿರುವುದನ್ನು ಭಾರತೀಯ ಸೇನೆ ಒಪ್ಪಿಕೊಳ್ಳಬೇಕು ಎಂದು ಪಾಕಿಸ್ಥಾನದ ಸೇನಾ ಮುಖ್ಯಸ್ಥ ಜನರಲ್ ರಹೀಲ್ ಷರೀಫ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಆದರೆ ಇದು ಸತ್ಯವಲ್ಲ ಎಂದು ಭಾರತೀಯ ಸೇನೆ ಪಾಕಿಸ್ಥಾನದ ಹೇಳಿಕೆಯನ್ನು ನಿರಾಕರಿಸಿದೆ.
2016 ರ ಸೆಪ್ಟೆಂಬರ್ 29 ರಂದು ಪಾಕಿಸ್ತಾನದ ವಿರುದ್ಧ ಭಾರತ ಕೈಗೊಂಡ ಸರ್ಜಿಕಲ್ ಸ್ಟ್ರೈಕ್ನ ನಂತರ ಪಾಕಿಸ್ಥಾನದಿಂದ ಪುನಃ ಪುನಃ ಕದನವಿರಾಮ ಉಲ್ಲಂಘನೆಯಾಗುತ್ತಿದೆ. ಅಲ್ಲದೇ ಭಾರತ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರವೇಶ ಮಾಡುತ್ತಿರುವುದನ್ನು ಪಾಕಿಸ್ಥಾನ ಖಂಡಿಸುತ್ತಿದೆ. ಅಲ್ಲದೇ ಗಡಿಯಾಚೆಗಿನ ಸರ್ಜಿಕಲ್ ಸ್ಟ್ರೈಕ್ ಮತ್ತು ಶೆಲ್ ದಾಳಿಯಲ್ಲಿ ಸೇನೆ ಮತ್ತು ಅರೆಸೇನೆಯಿಂದ 13 ಸೈನಿಕರು ಹುತಾತ್ಮರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.