ನವದೆಹಲಿ : 1949 ರಲ್ಲಿ ಭಾರತದ ಸಂವಿಧಾನವನ್ನು ಶಾಸನ ಸಭೆಯಲ್ಲಿ ಅಂಗೀಕರಿಸಿದ ದಿನವಾದ ನವೆಂಬರ್ 26 ರನ್ನು ದೇಶದಾದ್ಯಮತ ಸಂವಿಧಾನ ದಿವಸ್ ಆಗಿ ಆಚರಿಸಲಾಗುತ್ತಿದೆ.
ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ. ಇವರಿಗೆ ಗೌರವ ಸಲ್ಲಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ನವೆಂಬರ್ 26 ನ್ನು ಕೆಲ ವರ್ಷಗಳ ಹಿಂದೆಯೇ ಸಂವಿಧಾನ ದಿನವನ್ನಾಗಿ ಆಚರಿಸಬೇಕೆಂದು ಶಾಸನ ಸಭೆಯಲ್ಲಿ ಅಂಗೀಕಾರಗೊಂಡಿತ್ತು. ಆದರೆ ಕಳೆದ ವರ್ಷ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿ ನವೆಂಬರ್ 26 ನ್ನು ಸಂವಿಧಾನಕ್ಕೆ ಗೌರವ ಸೂಚಿಸುವ ದಿನವನ್ನಾಗಿ ಆಚರಿಸುವ ಸಲುವಾಗಿ ಸಂವಿಧಾನ್ ದಿವಸ್ ಎಂದು ಘೋಷಣೆ ಮಾಡಿತ್ತು.
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಬಗ್ಗೆ ಜಾಗೃತಿ ಮೂಡಿಸುವುದು, ಸಂವಿಧಾನದ ಮಹತ್ವವನ್ನು ಎಲ್ಲರಿಗೂ ತಿಳಿಸುವುದು. ಸಂವಿಧಾನದ ಜೊತೆಗೆ ಭಾವನಾತ್ಮಕ ಸಂಬಂಧವನ್ನು ಹೊಂದುವ ಸಲುವಾಗಿ ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ದೇಶಾದ್ಯಂತ ನವೆಂಬರ್ 26 ರಂದು ಆಚರಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.