ನವದೆಹಲಿ : ನೋಟು ನಿಷೇಧಕ್ಕೆ ವಿರೋಧ ವ್ಯಕ್ತಪಡಿಸಿರುವ ವಿಪಕ್ಷಗಳು ಕರೆ ನೀಡಿರುವ ಆಕ್ರೋಶ್ ದಿವಸ್ ಹೆಸರಿನಲ್ಲಿ ಕರೆ ಕೊಟ್ಟಿರುವ ಭಾರತ್ ಬಂದ್ಗೆ ಎಲ್ಲೆಡೆ ಹೆಚ್ಚು ಬೆಂಬಲ ನೀಡದ ಹಿನ್ನಲೆಯಲ್ಲಿ ಭಾರತ್ ಬಂದ್ಗೆ ಹೆಚ್ಚಿನ ಪ್ರತಿಕ್ರಿಯೆ ದೊರೆತಿಲ್ಲ.
ರೂ. 500 ಮತ್ತು 1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಪಕ್ಷ ಇಂದು ಬಂದ್ ಮಾಡುವುದಿಲ್ಲ. ಕೇವಲ ಪ್ರತಿಭಟನೆ ನಡೆಸುತ್ತೇವೆ ಎಂದು ಘೋಷಿಸಿದ್ದು, ಭಾರತ್ ಬಂದ್ಗೆ ಕರೆ ನೀಡಿರುವ ಇತರ ಪಕ್ಷಗಳು ಹಾಗೂ ಸಂಘಟನೆಗಳಿಗೆ ಹಿನ್ನಡೆಯುಂಟಾಗಿದೆ.
ನೋಟು ನಿಷೇಧ ಕುರಿತು ಹೆಚ್ಚಿನ ಬೆಂಬಲ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ವಿಪಕ್ಷಗಳು ಕರೆ ಕೊಟ್ಟಿರುವ ಭಾರತ್ ಬಂದ್ಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.
ಕಾಂಗ್ರೆಸ್, ಟಿಎಂಸಿ, ಆಮ್ ಆದ್ಮಿ ಪಕ್ಷ ಸೇರಿದಂತೆ ಹಲವು ಸಂಘಟನೆಗಳು ಭಾರತ್ ಬಂದ್ಗೆ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ಅವುಗಳ ಮಧ್ಯೆಯೇ ಈ ಕುರಿತು ವಿಚಾರಗಳಲ್ಲಿ ವಿಭಜನೆಯಾಗಿವೆ. ಹಾಗಾಗಿ ಭಾರತ್ ಬಂದ್ ನಡೆಸದೆ ಇಂದು ಆಕ್ರೋಶ್ ದಿವಸದ ಪ್ರಯುಕ್ತ ಪ್ರತಿಭಟನೆ ನಡೆಸಲಿವೆ.
ದೇಶದ ಹಲವೆಡೆಗಳಲ್ಲಿ ಸಂಚಾರ, ಸಾರಿಗೆ ವ್ಯವಸ್ಥೆ ಹಾಗೂ ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿರುವುದರಿಂದ ನಾಗರಿಕರಿಗೆ ಯಾವುದೇ ರೀತಿಯ ಬಂದ್ ಬಿಸಿ ತಟ್ಟಿಲ್ಲ.
ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯನವರು ಬಂದ್ಗೆ ಬೆಂಬಲವಿಲ್ಲ ಎಂದು ಹೇಳಿರುವುದರಿಂದ ಬಂದ್ ಬಿಸಿ ಅಷ್ಟಾಗಿ ತಟ್ಟುವುದಿಲ್ಲ ಎಂದು ಹೇಳಲಾಗುತ್ತಿದೆ.
ಬಂದ್ಗೆ ಹೆಚ್ಚಿನ ಬೆಂಬಲ ಇರದಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸ್ ಇಲಾಖೆ ಸಜ್ಜಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.