ನವದೆಹಲಿ: ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಬೋರ್ಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಗಳ ಬೃಹತ್ ಹಾಜರಾತಿ ಯುವಕರ ಸಕಾರಾತ್ಮಕತೆಯನ್ನು ತೋರಿಸುತ್ತದೆ. ಜನರು ತಮ್ಮ ಮಕ್ಕಳ ಉಜ್ವಲ ಭವಷ್ಯವನ್ನು ನಿರ್ಮಿಸುವಂತೆ ಮನವಿ ಮಾಡಿದದ್ದಾರೆ.
ಜಮ್ಮು-ಕಾಶ್ಮೀರದ ಯುವಜನತೆ ಶಿಕ್ಷಣದ ಮೂಲಕ ಜೀವದಲ್ಲಿ ಉತ್ತುಂಗಕ್ಕೇರುವ ಆಸಕ್ತಿ ಹೊಂದಿದ್ದಾರೆ. ಅವರ ಉತ್ಸಾಹಕ್ಕೆ ನಾನು ಪ್ರಶಂಸಿಸುತ್ತೇನೆ. ಕಾಶ್ಮೀರದ ಕೆಲವು ಪ್ರತಿನಿಧಿಗಳನ್ನು ನಾನು ಭೇಟಿ ಮಾಡಿ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಕಾಶ್ಮೀರ ಕಣಿವೆಯ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣದ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದ್ದೇನೆ. ಮಕ್ಕಳ sಲಿತಾಂಶವನ್ನು ನೋಡಿ ಸಂತೋಷವಾಗಿದೆ ಎಂದು ಅವರು ಹೇಳಿದ್ದಾರೆ.
ದೇಶದ ಸೈನಿಕರ ನೈತಿಕತೆಯನ್ನು ಹೆಚ್ಚಿಸಲು ಒತ್ತಾಯಿಸಿದ ಪ್ರಧಾನಿ ಮೋದಿ ಅವರು, ಸೈನಿಕರು ನಮ್ಮ ನಿಜವಾದ ಶಕ್ತಿಯಾಗಿದ್ದಾರೆ. ಇಡೀ ರಾಷ್ಟ್ರ ಅವರ ಪರ ನಿಂತಾಗ ಅವರ ಶಕ್ತಿ ಹೆಚ್ಚುತ್ತದೆ. ನನಗೆ ನಿಮ್ಮ ಕಷ್ಟ ಅರ್ಥವಾಗುತ್ತದೆ. ಕಳೆದ 70 ವರ್ಷಗಳಿಂದ ದೇಶದಲ್ಲಿರುವ ಖಾಯಿಲೆಯ ಸೋಂಕು ಎಲ್ಲರ ಮೇಲೆ ಪರಿಣಮಿಸಿದೆ. ಅದರ ಚಿಕಿತ್ಸೆ ಸರಣವಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.