ನವದೆಹಲಿ: ಕೇಂದ್ರ ಸರ್ಕಾರದ ಅನಾಣ್ಯೀಕರಣ ನೀತಿಗೆ ಬೆಂಬಲ ವ್ಯಕ್ತಪಡಿಸಿದ ವಿಶ್ವ ಹಿಂದು ಪರಿಷತ್ (ವಿಎಚ್ಪಿ) ಮತ್ತು ಬಜರಂಗ ದಳ, ನಗದು ರಹಿತ ಆರ್ಥಿಕತೆ ಪ್ರಚಾರಕ್ಕೆ ತಮ್ಮ ಕಾರ್ಯಕರ್ತರಿಗೆ ತರಬೇತಿ ನೀಡಲಿವೆ.
ಕೇಂದ್ರ ಸರ್ಕಾರದ ಅನಾಣ್ಯೀಕರಣ ನೀತಿಯನ್ನು ವಿರೋಧಿಸಿ ಪ್ರತಿಪಕ್ಷಗಳು ಸೋಮವಾರ ಪ್ರತಿಭಟನಾ ರ್ಯಾಲಿಗಳನ್ನು ನಡೆಸಿದ್ದು, ಇದಕ್ಕೆ ಯಾವುದೇ ಬೆಂಬಲ ದೊರೆತಿಲ್ಲ. ಬಜರಂಗದಳ ಶೀಘ್ರದಲ್ಲೇ ನಗದು ರಹಿತ ವ್ಯವಹಾರಕ್ಕೆ ಅಭಿಯಾನ ಆರಂಭಿಸಲಿದೆ ಎಂದು ವಿಶ್ವ ಹಿಂದು ಪರಿಷತ್ನ ಅಂತಾರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಡಾ. ಸುರೇಂದ್ರ ಜೈನ್ ಹೇಳಿದ್ಧಾರೆ.
ನಗದು ರಹಿತ ವ್ಯವಹಾರಗಳಿಗೆ ಜನರಿಗೆ ತರಬೇತಿ ನೀಡಲು ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಕ್ಕೆ ಜನರಲ್ಲಿ ಕೇವಲ ಒಂದು ಮೊಬೈಲ್, ಬ್ಯಾಂಕ್ ಖಾತೆ ಮತ್ತು ಇಂಟರ್ನೆಟ್ ಇರುವುದು ಅಗತ್ಯ ಎಂದು ಸುರೇಂದ್ರ ಜೈನ್ ಹೇಳಿದ್ದಾರೆ.
ಕಪ್ಪು ಹಣ, ಭಯೋತ್ಪಾದನೆ ಮತ್ತು ಕಳ್ಳಸಾಗಣೆ ತಡೆಗಟ್ಟಲು ಇದು ಪ್ರಮುಖ ಹೆಜ್ಜೆಯಾಗಿದೆ. ಇದು ಕೇವಲ ಸರ್ಕಾರದ ಹೋರಟವಲ್ಲ. ಭಾರತ ದೇಶದ ಜನರು ಇದರ ನಿರ್ಮೂಲನೆಗೆ ಮುಂದಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.